ಶೂರ್ಪನಖಿ ಹೇಳಿಕೆ; ಪ್ರಧಾನಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ರೇಣುಕಾ ಚೌಧರಿ

Date:

ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಗುರುವಾರ ಸೂರತ್ ನ್ಯಾಯಾಲಯ ತೀರ್ಪು ನೀಡಿದ ನಂತರ, ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧರಿ ಅವರು ಸಂಸತ್ತಿನಲ್ಲಿ ತಮ್ಮನ್ನು ರಾಮಾಯಣದ ‘ಶೂರ್ಪನಖಿ’ ಪಾತ್ರಕ್ಕೆ ಹೋಲಿಸಿ ತಮಾಷೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.

“ನನ್ನನ್ನು ಶೂರ್ಪನಖಿ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ, ನಾನು ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ” ಎಂದು ರೇಣುಕಾ ಚೌಧರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

2018ರ ರಾಜ್ಯಸಭಾ ಕಲಾಪದ ಹಳೆ ವಿಡಿಯೋದಲ್ಲಿ ಆಧಾರ್‌ ಕಾರ್ಡ್‌ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿಕೆಗೆ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಂದಿನ ಸ್ಪೀಕರ್ ವೆಂಕಯ್ಯ ನಾಯ್ಡು ಅವರು, “ನಿಮ್ಮ ಸಮಸ್ಯೆ ಏನು? ನಿಮಗೇನಾದರೂ ಸಮಸ್ಯೆ ಆಗಿದ್ದರೆ ವೈದ್ಯರ ಬಳಿ ಹೋಗಿ, ದಯವಿಟ್ಟು ಸುಮ್ಮನೇ ಕುಳಿತುಕೊಳ್ಳಿ” ಎಂದು ತರಾಟೆಗೆ ತೆಗೆದುಕೊಳ್ಳುತ್ತಾರೆ.

ವೆಂಕಯ್ಯ ನಾಯ್ಡು ಸೂಚನೆಯನ್ನೂ ಧಿಕ್ಕರಿಸಿ ರೇಣುಕಾ ನಗುವುದನ್ನು ಮುಂದುವರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸಭಾಪತಿಯವರೇ ರೇಣುಕಾ ಅವರಿಗೆ ನೀವು ನಗಲು ಬಿಡಿ. ರಾಮಾಯಣ  ಧಾರಾವಾಹಿಯ ನಂತರ ಈ ರೀತಿಯ ನಗುವನ್ನು ಕೇಳುವ ಸೌಭಾಗ್ಯ ಇಂದು ನಮಗೆ ಒದಗಿ ಬಂದಿದೆ” ಎಂದು ವ್ಯಂಗ್ಯವಾಡುತ್ತಾರೆ.

ಪ್ರಧಾನಿ ರಾಮಾಯಣದ ಉದಾಹರಣೆ ನೀಡಿ ರೇಣುಕಾ ಚೌಧರಿ ಅವರ ಕಾಲೆಳೆಯುತ್ತಿದ್ದಂತೆ ಬಿಜೆಪಿ ಸಂಸದರು ಮೇಜನ್ನು ಜೋರಾಗಿ ಕುಟ್ಟಿ ಬಿದ್ದು ಬಿದ್ದು ನಗಲು ಶುರು ಮಾಡುತ್ತಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈಗ ಕಾಂಗ್ರೆಸ್‌ ನಾಯಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ 18,171 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಖರ್ಗೆ ಮನವಿ

ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್)...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪಿಒಕೆ ವಿಷಯದಲ್ಲಿ ನೆಹರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ)...

ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು...