ಕೇರಳ | ಯೂಟ್ಯೂಬರ್ ಮೇಲೆ ಗುಂಪು ಹಲ್ಲೆ – ಹತ್ಯೆ; 10 ಮಂದಿ ಬಂಧನ

Date:

ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅರುಣಾಚಲ ಪ್ರದೇಶದ ಅಶೋಕ್‌ ದಾಸ್ (24) ಮೃತ ದುರ್ದೈವಿ. ಅವರು ವಾಲಕೋಮ್‌ನ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಅವರ ಮೇಲೆ 10 ಮಂದಿ ಗುಂಪು ಹಲ್ಲೆ ನಡೆಸಿ, ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಬಂಧಿತರನ್ನು – ವಿಜೇಶ್, ಅನೀಶ್, ಸತ್ಯನ್, ಸೂರಜ್, ಕೇಶವ್, ಇಲಿಯಾಸ್ ಕೆ ಪಾಲ್, ಅಮಲ್, ಅತುಲ್ ಕೃಷ್ಣ, ಎಮಿಲ್ ಮತ್ತು ಸನಲ್ – ಎಂದು ಗುರುತಿಸಲಾಗಿದೆ. ಎಲ್ಲರೂ ವಳಕೋನ್‌ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

“ಆರೋಪಿಗಳ ಗುಂಪು ಅಶೋಕ್ ಮೇಲೆ ಹಲ್ಲೆ ನಡೆಸಿದ್ದು, ಅನೈತಿಕ ಪೊಲೀಸ್ ಗಿರಿ ನಡೆಸಿದೆ. ಅಶೋಕ್‌ಗೆ ತಲೆ ಮತ್ತು ಎದೆಗೆ ಗಾಯಗಳಾಗಿವೆ. ಮರಣೋತ್ತರ ಪರೀಕ್ಷೆಯು ಗಾಯಗಳನ್ನು ದೃಢಪಡಿಸಿದೆ. ಅಶೋಕ್‌ನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಎರ್ನಾಕುಲಂ ಗ್ರಾಮಾಂತರ ಪೊಲೀಸ್ ಅಧಿಕಾರಿ ವೈಭವ್ ಸಕ್ಸೇನಾ ತಿಳಿಸಿದ್ದಾರೆ.

ವಾಲಕೊಮ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಮಹಿಳಾ ಸಹೋದ್ಯೋಗಿಯ ಮನೆಯಿಂದ ಅಶೋಕ್‌ನನ್ನು ಗುಂಪೊಂದು ಎಳೆದೊಯ್ದು ಥಳಿಸಿದೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಅಶೋಕ್ ಅವರನ್ನು ಕಂಬಕ್ಕೆ ಕಟ್ಟಿಹಾಕುವ ಮೊದಲು ಮತ್ತು ನಂತರ ಹಲ್ಲೆ ನಡೆಸಲಾಗಿದೆ. ಅಶೋಕ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆತನ ಸ್ನೇಹಿತೆ ಮತ್ತು ಆಕೆಯ ಮನೆಯವರು ಹೇಳಿಕೆ ನೀಡಿದ್ದಾರೆ.

ಒನ್ಮನೋರಮಾ ವರದಿಯ ಪ್ರಕಾರ ಅಶೋಕ್ ದಾಸ್ ಯೂಟ್ಯೂಬರ್ ಆಗಿದ್ದು, ಅವರು ಹತ್ಯೆಯಾಗುವ 11 ದಿನಗಳ ಮೊದಲು ‘ಲಾಸ್ಟ್ ಆಫ್ ಟೈಮ್’ ಎಂಬ ಶೀರ್ಷಿಕೆಯಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...