11 ಮಕ್ಕಳ ಸಾವು | ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಮಾರಾಟ ನಿಷೇಧ

Date:

Advertisements

ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ಭಾರೀ ವಿರೋಧ, ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸರ್ಕಾರವು 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ನಿರ್ದೆಶನ ಹೊರಡಿಸಿದೆ. ಮಕ್ಕಳಿಗೆ ನೀಡಲಾಗಿದ್ದ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿದೆ. ಕೇರಳದಲ್ಲಿಯೂ ಸಿರಪ್ ಅನ್ನು ನಿಷೇಧಿಸಿ, ಅಲ್ಲಿ ಸರ್ಕಾರ ಆದೇಶಿಸಿದೆ.

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಆ ಸಿರಪ್ ಕೊಟ್ಟು, ಮಕ್ಕಳ ಸಾವಿಗೆ ಕಾರಣನಾಅಗಿದ್ದ ವೈದ್ಯನನ್ನು ಕೂಡ ಬಂಧಿಸಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚಿಂದ್ವಾರ ಜಿಲ್ಲೆಯ ಪಾರಾಸಿಯಾದ ಮಕ್ಕಳ ತಜ್ಞ ಪ್ರವೀಣ್ ಸೋನಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸೋನಿ ಅವರು ಸರ್ಕಾರಿ ವೈದ್ಯರಾಗಿದ್ದಾರೆ. ಆದಾಗ್ಯೂ, ಅವರು ಖಾಸಗಿ ಕ್ಲಿನಿಕ್ಅನ್ನು ನಡೆಸುತ್ತಿದ್ದು, ಆ ಕ್ಲಿನಿಕ್‌ಗೆ ಬಂದಿದ್ದ ಮಕ್ಕಳಿಗೆ ಸಿರಪ್ ಕೊಟ್ಟಿದ್ದರು ಎಂದು ವರದಿಯಾಗಿದೆ.

ಸರ್ಕಾರವು ಈ ಹಿಂದೆ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕಾಲ್ ಎಂಬ ವಿಷಕಾರಿ ವಸ್ತು ಪತ್ತೆಯಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, ಈ ಸಿರಪ್‌ಅನ್ನು ಪರೀಕ್ಷಿಸಿದ್ದ ಚೆನ್ನೈನಲ್ಲಿರುವ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ಔಷಧ ವಿಶ್ಲೇಷಕರು ‘ಪ್ರಮಾಣಿತ ಗುಣಮಟ್ಟದಲ್ಲಿಲ್ಲ’ ಎಂದು ವರದಿ ನೀಡಿದ್ದರು. ಆ ವರದಿ ಆಧರಿಸಿ ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಸಿರಪ್ ಮಾರಾಟ ನಿಷೇಧಿಸಿತ್ತು.

ಕೋಲ್‌ಡ್ರಿಫ್ ಲೇಬಲ್‌ನ ಕೆಮ್ಮಿನ ಸಿರಪ್‌ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧವೂ ಮಧ್ಯಪ್ರದೇಶ ಸರ್ಕಾರ ಪ್ರಕರಣ ದಾಖಲಿಸಿದೆ.

ಈ ಲೇಖನ ಓದಿದ್ದೀರಾ?: ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಮಧ್ಯಪ್ರದೇಶದಲ್ಲಿ ಸಂಭವಿಸಿರುವ ಸಾವುಗಳನ್ನು ಅಲ್ಲಿನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ‘ಅತ್ಯಂತ ದುರಂತ’ ಎಂದಿದ್ದಾರೆ. ಈ ಸಾವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ಕೋಲ್‌ಡ್ರಿಫ್ ಸಿರಪ್‌ನಿಂದಾಗಿ ಚಿಂದ್ವಾರದಲ್ಲಿ ಮಕ್ಕಳ ಸಾವುಗಳು ಅತ್ಯಂತ ದುರಂತ. ಈ ಸಿರಪ್ ಮಾರಾಟವನ್ನು ಮಧ್ಯಪ್ರದೇಶದಾದ್ಯಂತ ನಿಷೇಧಿಸಲಾಗಿದೆ. ಸಿರಪ್ ತಯಾರಿಸುವ ಕಂಪನಿ ಮೇಲೂ ನಿಷೇಧ ಹೇರಲಾಗುತ್ತಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

Download Eedina App Android / iOS

X