ಉತ್ತರಾಖಂಡ | 11 ನಗರಗಳಿಗೆ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರ ಹೆಸರು ಮರು ನಾಮಕರಣ

Date:

Advertisements

ರಾಜ್ಯದ 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆದೇಶ ಹೊರಡಿಸಿದ್ದಾರೆ.

ಮರು ನಾಮಕರಣ ಮಾಡಲಾಗುವ ನಗರಗಳ ಹೆಸರನ್ನು ಹಿಂದೂ ದೇವತೆಗಳು, ಖ್ಯಾತನಾಮರು, ಪೌರಾಣಿಕ ವ್ಯಕ್ತಿಗಳು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಮುಖ ನಾಯಕರ ಹೆಸರುಗಳೊಂದಿಗೆ ಮರು ನಾಮಕರಣ ಮಾಡಲಾಗುವುದು ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಹರಿದ್ವಾರ, ಡೆಹ್ರಾಡೂನ್, ನೈನಿತಾಲ್ ಮತ್ತು ಉಧಮ್ ಸಿಂಗ್ ಸೇರಿ 11 ನಗರಗಳ ಹೆಸರು ಬದಲಾಯಿಸಲಾಗುವುದು. ಸಾರ್ವಜನಿಕ ಭಾವನೆ ಮತ್ತು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಈ ಸ್ಥಳಗಳ ಮರುನಾಮಕರಣ ಮಾಡಲಾಗುತ್ತದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದಂತೆ, ಹರಿದ್ವಾರ ಜಿಲ್ಲೆಯ ಔರಂಗಜೇಬಪುರವನ್ನು ಶಿವಾಜಿ ನಗರ, ಜಂಜಿಯಾಲಿಯನ್ನು ಆರ್ಯ ನಗರ, ಚೌಧಪುರವನ್ನು ಜ್ಯೋತಿಬಾ ಫುಲೆ ನಗರ, ಮೊಹಮ್ಮದ್‌ಪುರ ಜಾಟ್ ಅನ್ನು ಮೋಹನ್‌ಪುರ ಜಾಟ್, ಖಾನ್ಪುರ್ ಖುರೇಷಿಯನ್ನು ಅಂಬೇಡ್ಕರ್ ನಗರ, ಧೀರ್ಪುರವನ್ನು ನಂದಪುರ, ಅಕ್ಬರ್ಪುರ್ ಫಜಲ್ಪುರವನ್ನು ವಿಜಯನಗರ ಮತ್ತು ಖಾನ್ಪುರವನ್ನು ಶ್ರೀಕೃಷ್ಣಪುರ ಎಂದು ಮರುನಾಮಕರಣ ಮಾಡಲಾಗುತ್ತದೆ.

ಡೆಹ್ರಾಡೂನ್ ಜಿಲ್ಲೆಯಲ್ಲಿ, ಪಿರುವಾಲವನ್ನು ರಾಮ್‌ಜಿ ವಾಲಾ, ಪೀರುವಾಳವನ್ನು ಕೇಸರಿ ನಗರ, ಚೌಧಪುರ್ ಖುರ್ದ್ ಅನ್ನು ಪೃಥ್ವಿರಾಜ್ ನಗರ ಮತ್ತು ಅಬ್ದುಲ್ಲಾಪುರವನ್ನು ದಶರಥನಗರ ಎಂದು ಬದಲಿಸಲಾಗುತ್ತದೆ.

ನೈನಿತಾಲ್ ಜಿಲ್ಲೆಯಲ್ಲಿ, ನವಾಬಿ ರಸ್ತೆಯನ್ನು ಅಟಲ್ ಮಾರ್ಗ ಎಂದು ಮರುನಾಮಕರಣ ಮಾಡಲಾಗುವುದು ಮತ್ತು ಪಂಚಕ್ಕಿ ಐಟಿಐ ರಸ್ತೆಯನ್ನು ಗುರು ಗೋವಲ್ಕರ್ ಮಾರ್ಗ ಎಂದು ಹೆಸರಿಡಲಾಗುವುದು. ಉಧಮ್ ಸಿಂಗ್ ನಗರ ಜಿಲ್ಲೆಯ ನಗರ ಪಂಚಾಯತ್ ಸುಲ್ತಾನ್‌ಪುರ ಪಟ್ಟಿಯನ್ನು ಕೌಶಲ್ಯ ಪುರಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X