ಶಾಲೆಯ ಏಳಿಗೆಗಾಗಿ ‘ಬಲಿ’ ಹೆಸರಿನಲ್ಲಿ ಬಾಲಕನ ಕೊಲೆ; ಖಾಸಗಿ ಶಾಲೆ ಮಾಲೀಕ, ಪ್ರಾಂಶುಪಾಲ ಸೇರಿ ಐವರ ಬಂಧನ

Date:

Advertisements

ಶಾಲೆಗಾಗಿ ಬಲಿಕೊಟ್ಟರೆ, ತಮ್ಮ ಶಾಲೆ ಏಳಿಗೆ ಹೊಂದುತ್ತದೆ ಎಂಬ ಭ್ರಮೆ, ಮೌಢ್ಯದಿಂದ 11 ವರ್ಷದ ಬಾಲಕನ್ನು ‘ಬಲಿ’ ಹೆಸರಿನಲ್ಲಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ. ಬಾಲಕನನ್ನು ಕೊಂದ ಖಾಸಗಿ ಶಾಲೆ ಮಾಲೀಕ, ಪ್ರಾಂಶುಪಾಲ, ನಿರ್ದೇಶಕ ಹಾಗೂ ಇಬ್ಬರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಶಾಲೆ ‘ಡಿಎಲ್ ಪಬ್ಲಿಕ್ ಸ್ಕೂಲ್’ನಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಡುತ್ತಿದ್ದ ವಿದ್ಯಾರ್ಥಿ ಕೃತಾರ್ಥ್ ಎಂಬಾತನನ್ನು ಶಾಲೆಯ ಆಡಳಿತ ಮಂಡಳಿ ಬಲಿಕೊಟ್ಟಿದೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ, ಆತನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಮಾಲೀಕ ಜಸೋಧನ್ ಸಿಂಗ್, ‘ಮೌಢ್ಯಾಚರಣೆ’ಯಲ್ಲಿ ಭಾರೀ ನಂಬಿಕೆ ಇಟ್ಟಿದ್ದಾರೆ. ಅವರಿಗೆ ಶಾಲೆ ಮತ್ತು ಕುಟುಂಬದ ಏಳಿಗೆಗಾಗಿ ಮಗುವನ್ನು ಬಲಿಕೊಡಬೇಕೆಂದು ಶಾಲೆಯ ನಿರ್ದೇಶಕ ದಿನೇಶ್ ಬಾಘೇಲ್ ತಿಳಿಸಿದ್ದಾರೆ. ಅದನ್ನು ನಂಬಿದ ಮಾಲೀಕ ಜಸೋಧನ್ ಸಿಂಗ್, ಶಾಲೆಯ ವಿದ್ಯಾರ್ಥಿಯನ್ನು ಬಲಿಕೊಡಲು ನಿರ್ಧರಿಸಿದ್ದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಪ್ರಕರಣದಲ್ಲಿ ಶಾಲೆಯ ಮಾಲೀಕ ಜಸೋಧನ್ ಸಿಂಗ್, ನಿರ್ದೇಶಕ ದಿನೇಶ್ ಬಾಘೇಲ್ ಜೊತೆಗೆ, ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್ ಮತ್ತು ಇಬ್ಬರು ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ ಮತ್ತು ವೀರಪಾಲ್ ಸಿಂಗ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಐವರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತಾ 2023ರ ಸೆಕ್ಷನ್ 103 (1)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಸೆಪ್ಟೆಂಬರ್ 23 ರಂದು, ಶಿಕ್ಷಕ ರಾಮಪ್ರಕಾಶ್ ಸೋಲಂಕಿ, ದಿನೇಶ್ ಬಾಘೇಲ್ ಮತ್ತು ಶಾಲೆಯ ಮಾಲೀಕ ಜಸೋಧನ್ ಸಿಂಗ್ ಅವರು ಶಾಲೆಯ ಹಾಸ್ಟೆಲ್‌ನಿಂದ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಬಳಿಕ, ಆತನನ್ನು ಕೊಲೆ ಮಾಡಿದ್ದಾರೆ” ಎಂದು ಹತ್ರಾಸ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ಕೃತಾರ್ಥ್‌ಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅತನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಾಲಕನ ಪೋಷಕರಿಗೆ ಆರೋಪಿಗಳು ಕರೆ ಮಾಡಿ ತಿಳಿಸಿದ್ದಾರೆ. ಆದರೆ, ಮಗುವಿನ ಕುಟುಂಬಸ್ಥರು ತಮ್ಮ ಮಗ ಕೃತಾರ್ಥ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X