ಜಾರ್ಖಂಡ್ನಲ್ಲಿ ಈ ವರ್ಷದ ಅಬಕಾರಿ ಕಾನ್ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ನೇಮಕಾತಿ ದೈಹಿಕ ಪರೀಕ್ಷೆಯ ಸಮಯದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಈ ಬಾರಿ ಅಬಕಾರಿ ಕಾನ್ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10 ಕಿಮೀ ಓಡಬೇಕು, ಫಿಟ್ನೆಸ್ ಮಟ್ಟವನ್ನು ಮೌಲ್ಯಮಾಪನ ಮಾಡದಿರುವುದು, ಅತಿಯಾದ ಆರ್ದ್ರತೆ ಮತ್ತು ಲಿಖಿತ ಪರೀಕ್ಷೆಯ ಮೊದಲು ದೈಹಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಉನ್ನತ ಅಧಿಕಾರಿಗಳು ಉಲ್ಲೇ ಖಿಸಿದ್ದಾರೆ.
ಪರೀಕ್ಷೆಗೆ ಕಡ್ಡಾಯವಾಗಿರುವ 10 ಕಿಮೀ ಓಟವನ್ನು ಓಡುವಾಗ 12 ಮಂದಿ ಸಾವನ್ನಪ್ಪಿದ್ದಾರೆ. ಆಗಸ್ಟ್ 22 ರಿಂದ ಜಾರ್ಖಂಡ್ ಪೊಲೀಸರು ಮೇಲ್ವಿಚಾರಣೆಯಲ್ಲಿ ದೈಹಿಕ ಪರೀಕ್ಷೆಗಳು ನೇಮಕಾತಿ ಡ್ರೈವ್ನ ಮೊದಲ ಹಂತ ನಡೆಯುತ್ತಿದೆ. 60 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಅರ್ಹ ಅಭ್ಯರ್ಥಿಗಳು ನಂತರ ಲಿಖಿತ ಪರೀಕ್ಷೆ ಮತ್ತು ಅಂತಿಮ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್ ಫೋಗಟ್ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು
ಮೃತರನ್ನು 19 ರಿಂದ 31 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಪಲಾಮು ಮೂಲದ ಅಮರೇಶ್ ಕುಮಾರ್, ಪ್ರದೀಪ್ ಕುಮಾರ್, ಅಜಯ್ ಮಹತೋ, ಅರುಣ್ ಕುಮಾರ್ ಮತ್ತು ದೀಪಕ್ ಕುಮಾರ್ ಪಾಂಡು, ಹಜಾರಿಬಾಗ್ನ ಮನೋಜ್ ಕುಮಾರ್ ಮತ್ತು ಸೂರಜ್ ಕುಮಾರ್ ವರ್ಮಾ,ಸಾಹಿಬ್ಗಂಜ್ನ ವಿಕಾಸ್ ಲಿಂಡಾ ಮತ್ತು ಗಿರಿದಿಹ್ನ ಸುಮಿತ್ ಯಾದವ್. ಇನ್ನು ಮೂವರ ವಿವರಗಳನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್ 2ರವರೆಗೆ ಒಟ್ಟು 1.87 ಲಕ್ಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು,ಅದರಲ್ಲಿ 1.17 ಲಕ್ಷ ಮಂದಿ ಮುಂದಿನ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.
ಸರ್ಕಾರಿ ಮೂಲಗಳ ಪ್ರಕಾರ, ಜಾರ್ಖಂಡ್ ರಾಜ್ಯವು 2000ರಲ್ಲಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ನೇಮಕಾತಿ ಅಭಿಯಾನವನ್ನು ನಡೆಸಲಾಗಿದೆ. 2008 ಮತ್ತು 2019 ರಲ್ಲಿ ಪ್ರಾರಂಭಿಸಲಾಯಿತಾದರೂ ಅದು ಪೂರ್ಣಗೊಂಡಿರಲಿಲ್ಲ.

ಭಾರತದಲ್ಲಿ ಜೀವಕ್ಕೆ ಬೆಲೆ ಇಲ್ಲ.ಇದು ಸೀದಾ ಸೀದಾ ಸರಕಾರಿ ಕೊಲೆ.