ದೇಶದಲ್ಲಿ ಇಂದಿಗೂ ಹೆಣ್ಣುಮಕ್ಕಳು ಅಸುರಕ್ಷಿತ; 12 ವರ್ಷಗಳ ಬಳಿಕ ನಿರ್ಭಯಾ ತಾಯಿ

Date:

Advertisements

ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನಡೆದು ನಿನ್ನೆ (ಡಿಸೆಂಬರ್ 16) 12 ವರ್ಷಗಳಾಗಿದೆ. ಈ ಪ್ರಕರಣ ನಡೆದು 12 ವರ್ಷಗಳು ಕಳೆದರೂ ದೇಶದಲ್ಲಿ ಇಂದಿಗೂ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

2012ರ ಡಿಸೆಂಬರ್ 16ರಂದು 23 ವರ್ಷದ ಯುವತಿಯ ಮೇಲೆ (ನಿರ್ಭಯಾ) ದಕ್ಷಿಣ ದೆಹಲಿಯಲ್ಲಿ ಚಲಿಸುವ ಬಸ್‌ನೊಳಗೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಯುವತಿ ಡಿಸೆಂಬರ್ 29ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ನಿಧನರಾದರು.

ಇದನ್ನು ಓದಿದ್ದೀರಾ? ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

Advertisements

ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದ ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಎಂಬ ನಾಲ್ವರು ಆರೋಪಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. ಇನ್ನು ರಾಮ್ ಸಿಂಗ್ ಎಂಬ ಆರೋಪಿ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೋರ್ವ ಆರೋಪಿ ಬಾಲಪರಾಧಿಯಾಗಿದ್ದು ಮೂರು ವರ್ಷ ಜೈಲು ಶಿಕ್ಷೆಯ ಬಳಿಕ 2015ರಲ್ಲಿ ಬಿಡುಗಡೆಗೊಂಡಿದ್ದಾನೆ.

ಘಟನೆ ನಡೆದು ಹನ್ನೆರಡು ವರ್ಷಗಳ ನಂತರ ಸೋಮವಾರ ನಿರ್ಭಯಾಳ ತಾಯಿ ಆಶಾದೇವಿ ಅವರು ‘ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ರಾಷ್ಟ್ರೀಯ ಸಮಾವೇಶ’ದಲ್ಲಿ ಭಾಗಿಯಾಗಿ ಭಾವನಾತ್ಮಕ ಭಾಷಣ ಮಾಡಿದರು.

ಇದನ್ನು ಓದಿದ್ದೀರಾ? ಸ್ವಾತಿಜಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ: ಕೇಜ್ರಿವಾಲ್‌ಗೆ ನಿರ್ಭಯಾ ತಾಯಿಯ ಮನವಿ

“12 ವರ್ಷಗಳ ನಂತರವೂ ಪರಿಸ್ಥಿತಿ ಬದಲಾಗಿಲ್ಲ ಎಂದು ನಾನು ಬಹಳ ನೋವಿನಿಂದ ಹೇಳುತ್ತೇನೆ. ದೇಶದ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ. ನನ್ನ ಮಗಳ ನ್ಯಾಯಕ್ಕಾಗಿ ನಾನು ಹೋರಾಡುವಾಗ ನನ್ನ ಮಗಳು ಇನ್ನೆಂದಿಗೂ ಹಿಂದಿರುಗುವುದಿಲ್ಲ ಎಂದು ನನಗೆ ತಿಳಿದಿತ್ತು. ಆದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಇಂತಹ ಘಟನೆ ಮತ್ತೆ ಮರುಕಳಿಸಬಾರದು ಎಂಬುದೊಂದೆ ನನ್ನ ಮನಸ್ಸಲ್ಲಿತ್ತು. ಅದಕ್ಕಾಗಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾದೆ. ಆದರೆ ಎಲ್ಲವೂ ನಿಷ್ಪ್ರಯೋಜಕ” ಎಂದಿದ್ದಾರೆ.

“ಇಂದಿಗೂ ಹಲವು ಅತ್ಯಾಚಾರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರದು. ಅಪರಾಧಿಗಳು ಯಾರೆಂದು ಗುರುತಿಸುವುದೇ ಒಂದು ವರ್ಷ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು. ಈ ಸಂದರ್ಭದಲ್ಲೇ ಕೋಲ್ಕತ್ತಾದಲ್ಲಿ ನಡೆದ ಆರ್‌ಜಿ ಕರ್ ಘಟನೆಯನ್ನು ಉಲ್ಲೇಖಿಸಿದ ಆಶಾದೇವಿ ಅವರು, ನಿಜವಾಗಿ ಏನಾಯಿತು ಎಂಬುದು ಇನ್ನೂ ಯಾರಿಗೂ ತಿಳಿದಿಲ್ಲ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X