ಜಮ್ಮು- ಕಾಶ್ಮೀರ | ಪೂಂಚ್‌ನಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: 15 ಮಂದಿ ನಾಗರಿಕರು ಮೃತ್ಯು; 43 ಮಂದಿಗೆ ಗಾಯ

Date:

Advertisements

ಪಹಲ್ಗಾಮ್‌ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದನ್ನು ಸಹಿಸಿಕೊಳ್ಳಲಾಗದ ಪಾಕಿಸ್ತಾನದ ಸೇನೆಯು ಭಾರತದ ಅಡಿಯಲ್ಲಿರುವ ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಈ ಶೆಲ್ ದಾಳಿಯಿಂದ 15 ಮಂದಿ ನಾಗರಿಕರು ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಶೆಲ್ ದಾಳಿಯಿಂದ ಮನೆ ಮತ್ತು ಅಂಗಡಿಗಳಿಗೆ ಗುಂಡು ತಾಕಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನವು ಅಮಾಯಕ ಪ್ರವಾಸಿಗರು, ಮನೆಗಳಲ್ಲಿರುವ ನಿರಾಯುಧ ನಾಗರಿಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುವುದರಿಂದ ಗಡಿಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ.

ಎಲ್‌ಒಸಿಯ ಪ್ರದೇಶವಾಗಿರುವ ಪೂಂಚ್ ಮತ್ತು ರಾಜೌರಿ, ತಂಗ್ದಾರ್ ಪ್ರದೇಶಗಳಲ್ಲಿನ ಜನವಸತಿಯ ಪ್ರದೇಶಗಳ ಹಲವೆಡೆ ಶೆಲ್ ದಾಳಿ ನಡೆಸಿರುವ ಪಾಕಿಸ್ತಾನವು, ನಾಗರಿಕರನ್ನು ಗುರಿಯಾಗಿಸಿರುವುದಾಗಿ ವರದಿಯಾಗಿದೆ.

Advertisements

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನ ಸೇನೆಯ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದವರ ಪೈಕಿ 4 ಮಂದಿ ಕೇವಲ ಮಕ್ಕಳು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಮರಿಯಮ್ ಖಾತೂನ್ (7 ವರ್ಷ), ಮೊಹಮ್ಮದ್ ಜೈನ್ ಖಾನ್ (10 ವರ್ಷ), ಝೋಯಾ ಖಾನ್ (12 ವರ್ಷ) ಹಾಗೂ ವಿಹಾನ್ ಭಾರ್ಗವ್ (13 ವರ್ಷ) ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಪೂಂಚ್ ಜಿಲ್ಲಾಡಳಿತವು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಯಾವುದೇ ಸಹಾಯ ಅಥವಾ ಸ್ಪಷ್ಟೀಕರಣಕ್ಕಾಗಿ 01965-220258 ಅಥವಾ 90862-53188 ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.

ಪೂಂಚ್‌ ಸೇರಿದಂತೆ ಎಲ್‌ಒಸಿಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವಂತೆ ಕೇಂದ್ರ ಗೃಹ ಇಲಾಖೆಯು ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದೆ. ಅಲ್ಲದೇ, ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ನಿಗಾ ವಹಿಸಿರುವುದಾಗಿ ವರದಿ ತಿಳಿಸಿದೆ.

poonch
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X