ಮಣಿಪುರ ಹಿಂಸಾಚಾರ | ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

Date:

Advertisements

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಧ್ಯರಾತ್ರಿಯಲ್ಲಿ ಈ ದಾಳಿ ಆರಂಭವಾಗಿದ್ದು ಬೆಳಗಿನ ಜಾವ 2:15ರವರೆಗೆ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಲಾಗಿದೆ. ಪ್ರಾಣ ಕಳೆದುಕೊಂಡ ಸಿಬ್ಬಂದಿಗಳು ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್‌ಪಿಎಫ್ 128 ಬೆಟಾಲಿಯನ್‌ನವರು ಆಗಿದ್ದರು.

ಈ ನಡುವೆ ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಅವರು ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮಣಿಪುರದ ಹೊರಭಾಗದಲ್ಲಿ ಅಧಿಕ ಮತದಾನವಾಗಿದೆ ಮತ್ತು ಅಧಿಕ ಹಿಂಸಾಚಾರದ ಘಟನೆಗಳು ನಡೆದಿಲ್ಲ ಎಂದು ಶುಕ್ರವಾರ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

“ಸುಮಾರು ಒಂದು ಗಂಟೆಯ ಹಿಂದೆ ನಾವು ಸ್ವೀಕರಿಸಿದ ಕೊನೆಯ ವರದಿಯವರೆಗೂ, ಮತದಾನದ ಶೇಕಡ 75ರ ವ್ಯಾಪ್ತಿಯಲ್ಲಿತ್ತು. ಯಾವುದೇ ಪ್ರಮುಖ ಬಿಕ್ಕಟ್ಟುಗಳು ವರದಿಯಾಗಿಲ್ಲ” ಎಂದು ಶುಕ್ರವಾರ ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮಣಿಪುರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಅಂತಿಮವಾಗಿ ಶೇಕಡ 78.78ರಷ್ಟು ಮತದಾನ ನಡೆದಿದೆ.

“ಎರಡನೇ ಹಂತದ ಮತದಾನದ ವೇಳೆ ಜನರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇವಿಎಂ ಸರಿಯಾಗಿ ಕಾರ್ಯನಿರ್ವಹಿಸದ ಘಟನೆಯೊಂದು ಮತಗಟ್ಟೆಯಲ್ಲಿ ವರದಿಯಾಗಿದೆ. ಉಳಿದಂತೆ ಎಲ್ಲಿಯೂ ಯಾವುದೇ ಅಡಚಣೆ ಉಂಟಾಗಿಲ್ಲ” ಎಂದು ತಿಳಿಸಿದರು.

“2019ರ ಚುನಾವಣೆಗೆ ಹೋಲಿಸಿದರೆ ಹೊರ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತವಾಗಿದೆ. ಯಾವುದೇ ಪ್ರಮುಖ ಘಟನೆಗಳು ನಡೆದಿಲ್ಲ ಮತ್ತು ಮತದಾನವು ತುಂಬಾ ಉತ್ತೇಜನಕಾರಿಯಾಗಿದೆ” ಎಂದು ಝಾ ಹೇಳಿದ್ದರು.

ಇದನ್ನು ಓದಿದ್ದೀರಾ?  ಮಣಿಪುರ| ಇವಿಎಂ ನಾಶ; ಏ. 22ರಂದು 11 ಮತಗಟ್ಟೆಗಳಲ್ಲಿ ಮರು ಮತದಾನ

ಈ ಮೊದಲು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನದ ವೇಳೆ ಹಲವು ಹಿಂಸಾಚಾರದ ಘಟನೆಗಳು ನಡೆದಿದೆ. ಇವಿಎಂ ಧ್ವಂಸಗೊಳಿಸಲಾದ ಕಾರಣದಿಂದಾಗಿ ಒಳ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಗಿದೆ.

ಏಳು ಹಂತಗಳ ಸಾರ್ವತ್ರಿಕ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 102 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಏಪ್ರಿಲ್ 26ರಂದು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಎರಡನೇ ಹಂತದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

ಮೇ 7ರಂದು ಮುಂದಿನ ಸುತ್ತಿನ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X