ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

Date:

Advertisements

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶಿಕ್ಷಕರೊಬ್ಬರು ಬಾಲಕಿಯರ ವಿರುದ್ಧ ಮಾಡಿದ ಆರೋಪದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತ್ಮಹತ್ಯೆ ಚೀಟಿಯಲ್ಲಿ ವಿದ್ಯಾರ್ಥಿನಿಯರು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

Advertisements

“ನಮ್ಮನ್ನು ಯಾರು ನಂಬಲಿಲ್ಲ. ನಾವು ಮಾಡದ ತಪ್ಪಿಗೆ ನಮ್ಮನ್ನು ಸಿಕ್ಕಿಸಲಾಗಿದೆ. ನಮಗೆ ಇದರಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.  ನಾವು ತಪ್ಪಿತಸ್ಥರಲ್ಲ ಎಂಬುದನ್ನು ಹಾಸ್ಟೆಲ್ ವಾರ್ಡನ್‌ ಮಾತ್ರ ನಂಬಿದ್ದರು. ನಮ್ಮನ್ನು ಒಟ್ಟಿಗೆ ಅಂತ್ಯಸಂಸ್ಕಾರ ಮಾಡಿ” ಎಂದು ಆತ್ಮಹತ್ಯೆ ಚೀಟಿಯಲ್ಲಿ ಬರೆದಿಟ್ಟಿದ್ದಾರೆ.

“ಸಣ್ಣ ವಿಷಯಕ್ಕಾಗಿ ಈ ಇಬ್ಬರು ವಿದ್ಯಾರ್ಥಿನಿಯರ ವಿರುದ್ಧ ಕೆಳ ತರಗತಿಯ ವಿದ್ಯಾರ್ಥಿಗಳಿಂದ ದೂರು ಬಂದ ಕಾರಣ ಈ ಘಟನೆ ನಡೆದಿದೆ. ವಾರ್ಡನ್‌ ಇವರಿಬ್ಬರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಆದರೆ ಕೆಲವು ಘಟನೆಯ ಬಗ್ಗೆ ಇಬ್ಬರು ಬಾಲಕಿಯರು ಕುಗ್ಗಿ ಹೋಗಿದ್ದರು” ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ನಾರಾಯಣ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X