ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿಯಿಂದ ಇಬ್ಬರು ಸಾವು

Date:

Advertisements

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ.

ಮೃತರಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಸೇರಿದ್ದಾನೆ. ಕೈಸರ್‌ಜಂಗ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜ್‌ ಭೂಷಣ್ ಸಿಂಗ್‌ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಈ ಬಾರಿ ಸ್ಪರ್ಧಿಸಿದ್ದಾನೆ.

ವಿಡಿಯೋದಲ್ಲಿರುವ ಪ್ರಕಾರ ಅಪಘಾತದ ಸ್ಥಳದಲ್ಲಿ ಪೊಲೀಸ್ ಬೆಂಗಾವಲು ವಾಹನ ಎಂದು ಕಾರಿನ ಮುಂಭಾಗದ ಗಾಜಿನಲ್ಲಿ ತೋರಿಸುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

ಎಫ್‌ಐಆರ್‌ ವರದಿಯಂತೆ ದೂರುದಾರ ಚಂದಾ ಬೇಗಂ ಅವರ ಹೇಳಿಕೆಯಂತೆ ಇಂದು ಬೆಳಿಗ್ಗೆ 9 ಗಂಟೆಗೆ 17 ವರ್ಷದ ರೆಹಾನ್‌ ಹಾಗೂ 24 ವರ್ಷದ ಶಾಝಾದೆ ಅವರು ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಎದುರುನಿಂದ ವೇಗವಾಗಿ ಬಂದ ಎಸ್‌ಯುವಿ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಕಾರನ್ನು ವಶಪಡಿಸಿಕೊಂಡಿರುವ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಬ್ರಿಜ್‌ಭೂಷಣ್‌ ಅವರು ಹಿಂದಿನ ಕಾರಿನಲ್ಲಿ ಚಲಿಸುತ್ತಿದ್ದರೆಂಬುದಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸ್ಥಳದಲ್ಲಿ ಹಲವು ಜನರು ಸೇರಿದ್ದು, ಮೃತರ ಕುಟುಂಬ ಸದಸ್ಯರು ನ್ಯಾಯ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ದೆಹಲಿ ಕೋರ್ಟ್ ಈತನ ವಿರುದ್ಧ ಪ್ರಕರವನ್ನು ದಾಖಲಿಸಿದೆ. ಬಿಜೆಪಿ ಈ ಬಾರಿ ಬ್ರಿಜ್‌ಗೆ ಲೋಕಸಭಾ ಟಿಕೆಟ್ ನಿರಾಕರಿಸಿ ಆತನ ಪುತ್ರನಿಗೆ ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X