ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

Date:

Advertisements

ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ ಪಿಎಂಕೆಯ ನಾಯಕ ಎ ರಾಮ್‌ದಾಸ್ ಅವರು ದ್ವೀಪ ರಾಷ್ಟ್ರ ಶ್ರೀಲಂಕಾವು 21 ಮೀನುಗಾರರನ್ನು ಬಂಧಿಸಿದೆ. ಹಾಗೆಯೇ ಅವರ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾ.16ರಂದು ರಾತ್ರಿ ಶ್ರೀಲಂಕಾದ ಅಧಿಕಾರಿಗಳು ಮೀನುಗಾರರನ್ನು ಬಂಧಿಸಿದ್ದಾರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

Advertisements

ಕೇಂದ್ರ ವಿದೇಶಾಂಗ ಸಚಿವ ಎಸ್‌ ಜಯಶಂಕರ್‌ ಅವರಿಗೆ ಪತ್ರ ಬರೆದಿರುವ ಅಣ್ಣಾಮಲೈ, ತಮಿಳುನಾಡಿನ ರಾಮೇಶ್ವರದ 21 ಮೀನುಗಾರರನ್ನು ಶ್ರೀಲಂಕಾದ ನೌಕಾದಳದ ಅಧಿಕಾರಿಗಳು ಬಂಧಿಸಿ ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಅವರಿಗೆ ನೀವು ಸಹಾಯ ನೀಡಬೇಕೆಂದು ನಾವು ಮನವಿ ಮಾಡುತ್ತೇವೆ. ನಮ್ಮ ವಿದೇಶಾಂಗ ಇಲಾಖೆಯು ಮೀನುಗಾರರನ್ನು ಬೇಗನೆ ವಾಪಸ್ ಕರೆತರುವಂತೆ ಮಧ್ಯಸ್ಥಿಕೆ ವಹಿಸುವಂತೆ ಎಕ್ಸ್‌ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯಸಭೆ ಸದಸ್ಯ ಎ ರಾಮದಾಸ್ , ಕಳೆದ ಒಂದು ವಾರದಿಂದ ತಮಿಳುನಾಡು ಹಾಗೂ ಪುದುಚೆರಿಯಿಂದ 58 ಮೀನುಗಾರರನ್ನು ಶ್ರೀಲಂಕಾ ಬಂಧಿಸಿದೆ. ಅಲ್ಲದೆ ಕಳೆದ ಎರಡು ತಿಂಗಳಿನಿಂದ 80ಕ್ಕೂ ಹೆಚ್ಚು ಮೀನುಗಾರರನ್ನು ಬಂಧಿಸಲಾಗಿದೆ. ಶ್ರೀಲಂಕಾ ಸರ್ಕಾರ ತಮಿಳುನಾಡಿನ ಮೀನುಗಾರರನ್ನು ಅಂತ್ಯವಿಲ್ಲದ ಬಂಧನ ಹಾಗೂ ದಾಳಿಗಳನ್ನು ಕೇಂದ್ರ ಸರ್ಕಾರವು ತಡೆಯಬೇಕು. ಕೇಂದ್ರ ಸರ್ಕಾರವು 58 ಮೀನುಗಾರರು ಹಾಗೂ ಅವರ ಎಲ್ಲ ದೋಣಿಗಳನ್ನು ವಾಪಸ್‌ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X