ಪಹಲ್ಗಾಮ್ ದಾಳಿ | ಎರಡು ದಿನಗಳಲ್ಲಿ ಅಟ್ಟಾರಿ-ವಾಘಾ ಗಡಿ ಮೂಲಕ 272 ಮಂದಿ ಪಾಕಿಸ್ತಾನಕ್ಕೆ ವಾಪಸ್

Date:

Advertisements

ಕಳೆದ ಎರಡು ದಿನಗಳಲ್ಲಿ ಸುಮಾರು 272 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಭಾರತವನ್ನು ತೊರೆದಿದ್ದಾರೆ. 12 ರೀತಿಯ ವೀಸಾ ರದ್ದು ಮಾಡಿರುವ ಕಾರಣದಿಂದಾಗಿ ಭಾನುವಾರ ಇನ್ನೂ ಹಲವು ಮಂದಿ ಪಾಕಿಸ್ತಾನಕ್ಕೆ ವಾಪಸ್ ಹೋಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ 13 ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ 629 ಭಾರತೀಯರು ಪಂಜಾಬ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿ ದಾಟಿ ಪಾಕಿಸ್ತಾನದಿಂದ ಭಾರತಕ್ಕೆ ಮರಳಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು 28 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಇದಾದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗಿದೆ. ಪಾಕಿಸ್ತಾನದ ಪ್ರಜೆಗಳು ಭಾರತ ಬಿಟ್ಟು ಹೋಗಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

Advertisements

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕಾಶ್ಮೀರದ ಪಕ್ಷಗಳು, ಸಂಘಟನೆಗಳಿಂದ ಖಂಡನೆ; ಸಂವೇದನೆ ಮರೆತ ಮಾಧ್ಯಮಗಳು

ಇನ್ನು ಈಗಾಗಲೇ ಹಲವು ರೀತಿಯ ವೀಸಾಗಳನ್ನು ರದ್ದುಗೊಳಿಸಲಾಗಿದೆ. ಸಾರ್ಕ್ ವೀಸಾ ಇರುವವರು ಏಪ್ರಿಲ್ 26ಕ್ಕೂ ಮುನ್ನ ದೇಶ ಬಿಟ್ಟು ಹೋಗಬೇಕು. ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ನೀಡಲಾಗುವ ಆಗಮನ ವೀಸಾ, ವ್ಯವಹಾರ, ಚಲನಚಿತ್ರ, ಪತ್ರಕರ್ತ, ಸಾರಿಗೆ, ಸಮ್ಮೇಳನ, ಪರ್ವತಾರೋಹಣ, ವಿದ್ಯಾರ್ಥಿ, ಸಂದರ್ಶಕ, ಯಾತ್ರಿಕ, ಗುಂಪು ಪ್ರವಾಸಿ ಮತ್ತು ಗುಂಪು ಯಾತ್ರಿಕ ವೀಸಾಗಳನ್ನು ಹೊಂದಿರುವವರು ಏಪ್ರಿಲ್ 27ರ ಒಳಗಾಗಿ ದೇಶದಿಂದ ಹೊರಹೋಗಬೇಕು.

ವೈದ್ಯಕೀಯ ವೀಸಾಗಳನ್ನು ಹೊಂದಿರುವವರು ಏಪ್ರಿಲ್ 29ರ ಒಳಗಾಗಿ ದೇಶ ತೊರೆಯಬೇಕು. ಈ ಆದೇಶ ಹೊರಡಿಸಿದಾಗಿನಿಂದ ಯಾವುದೇ ಪಾಕಿಸ್ತಾನದ ಪ್ರಜೆಗಳಿಗೆ ಹೊಸದಾಗಿ ವೀಸಾವನ್ನು ನೀಡಲಾಗುವುದಿಲ್ಲ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ರಾಜತಾಂತ್ರಿಕ ಮತ್ತು ಅಧಿಕೃತ ವೀಸಾಗಳು ಸದ್ಯಕ್ಕೆ ಮಾನ್ಯವಾಗಿರುತ್ತವೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 25ರಂದು 191 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತವನ್ನು ತೊರೆದಿದ್ದಾರೆ. ಏಪ್ರಿಲ್ 26ರಂದು 81 ಜನರು ನಿರ್ಗಮಿಸಿದ್ದಾರೆ. ಏಪ್ರಿಲ್ 25ರಂದು ಪಾಕಿಸ್ತಾನದಿಂದ ಸುಮಾರು 287 ಭಾರತೀಯರು ವಾಪಸ್ ಬಂದಿದ್ದಾರೆ. 13 ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ ಒಟ್ಟು 342 ಭಾರತೀಯರು ಏಪ್ರಿಲ್ 26ರಂದು ಪಾಕಿಸ್ತಾನದಿಂದ ಅಟ್ಟಾರಿ-ವಾಘಾ ಗಡಿಯ ಮೂಲಕ ಮರಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X