ಉತ್ತರಾಖಂಡ್‌ನ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 19 ಮಂದಿಯಲ್ಲಿ ನಾಲ್ವರು ಸಾವು

Date:

Advertisements

ಉತ್ತರಾಖಂಡ್‌  ಹಿಮಾಲಯದ ಗರ್‌ವಾಲ್‌ ಪರ್ವತ ಶ್ರೇಣಿಗಳಲ್ಲಿನ ಸಹಸ್ತ್ರ ತಲ್ ಮಾಯಾಲಿಗೆ ಬೆಂಗಳೂರಿನಿಂದ ಚಾರಣಕ್ಕೆ ತೆರಳಿದ್ದ 19 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಉತ್ತರಾಖಂಡ್‌ನ ಕಂದಾಯ ಇಲಾಖೆಯ ಮಾಹಿತಿಯಂತೆ ಅಲ್ಲಿನ ಪ್ರದೇಶದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ಕಾರ್ಯಾಚರಣೆ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದು, ಆರು ಚಾರಣಿಗರನ್ನು ರಕ್ಷಿಸಿದೆ.

Advertisements

ಚಾರಣಿಗರನ್ನು ರಕ್ಷಿಸಲು ಹೆಚ್ಚಿನ ನೆರವಿಗಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಅನ್ನು ಕೋರಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳೀಯ ಗ್ರಾಮಸ್ಥರು ಸಹಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ವಿವಿಧ ಸಂಸ್ಥೆಯ ನಾಲ್ಕು ಹೆಲಿಕಾಪ್ಟರ್‌ಅನ್ನು ಪರಿಹಾರ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ರಕ್ಷಿಸಲಾದ ಚಾರಣಿಗರನ್ನು ಏರ್‌ಲಿಫ್ಟ್‌ ಮೂಲಕ ಡೆಹ್ರಾಡೂನ್‌ಗೆ ಕರೆತರಲಾಗಿದ್ದು, ತುರ್ತು ವೈದ್ಯಕೀಯ ನೆರವು ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

“ಸ್ಥಳದಲ್ಲಿ ಹವಾಮಾನ ಪರಿಸ್ಥಿತಿ ತುಂಬ ಕೆಟ್ಟದಾಗಿದೆ. ಹೆಚ್ಚು ಹಿಮ ಹಾಗೂ ಮಳೆ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಿದೆ. ಈ ಕಾರಣದಿಂದ ಪರಿಹಾರ ಹೆಲಿಕಾಪ್ಟರ್‌ ಟೇಕ್‌ಆಫ್‌ ಆಗಿಲ್ಲ. ಆದಾಗ್ಯೂ ಎರಡು ಪರಿಹಾರ ತಂಡಗಳು ಕಣಿವೆಯಲ್ಲಿ ಸಿಲುಕಿಕೊಂಡಿರುವ ಬಳಿ ತೆರಳುತ್ತಿವೆ. ಇಂದು ಬೆಳಿಗ್ಗೆ ಹವಾಮಾನ ಪರಿಸ್ಥಿತಿ ಒಂಚೂರು ಸುಧಾರಿಸಿತ್ತು. ಪರಿಹಾರ ಹೆಲಿಕಾಪ್ಟರ್‌ ಕಣಿವೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಚಾರಣಿಗರನ್ನು ಕರೆತಂದಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ” ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್‌ ತಿಳಿಸಿದ್ದಾರೆ.

ಪರಿಹಾರ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಕರ್ನಾಟಕ ಸರ್ಕಾರ ಕೂಡ ಪರಿಹಾರ ಕಾರ್ಯಾಚರಣೆಗೆ ಸಹಕರಿಸಲು ಉತ್ತರಾಖಂಡ್‌ಗೆ ಒಬ್ಬರು ಅಧಿಕಾರಿಗಳನ್ನು ಕಳಿಸುವ ಸಾಧ್ಯತೆಯಿದೆ.

ಇಂದು ಸಂಜೆಯೊಳಗೆ ಪರಿಹಾರ ಕಾರ್ಯಚರಣೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಸಂಸ್ಥೆಯ ಮೂಲಕ ಚಾರಣಿಗರು ಪರ್ವತ ಶ್ರೇಣಿಗಳಿಗೆ ತೆರಳಿದ್ದರು ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X