40 ಗಂಟೆ ಟ್ರಾಫಿಕ್ – ಮೂವರು ಸಾವು ಪ್ರಕರಣ: ‘ಇಷ್ಟು ಬೇಗ ಯಾಕೆ ಹೊರಟಿರಿ’ ಎಂದ NHAI ವಕೀಲ

Date:

Advertisements

ಮಧ್ಯಪ್ರದೇಶದ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ 40 ಗಂಟೆಗಳ ಸುದೀರ್ಘ ‘ಟ್ರಾಫಿಕ್ ಜಾಮ್‌’ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿ ‘ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ’ (NHAI) ಪರವಾಗಿ ವಾದ ಮಂಡಿಸಿರುವ ವಕೀಲರು ಅರ್ಜಿದಾರರನ್ನೇ ‘ನೀವು ಯಾಕೆ ಇಷ್ಟು ಬೇಗ ಮನೆಯಿಂದ ಹೊರಟಿರಿ’ ಎಂದು ಪ್ರಶ್ನಿಸಿ, ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಶುಕ್ರವಾರ ಸಂಭವಿಸಿದ 40 ಗಂಟೆಗಳ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಡಿದದ ವಕೀಲ ಆನಂದ್ ಅಧಿಕಾರಿ ಅವರು ನ್ಯಾಯಾಲಯದಲ್ಲಿ ಪಿಐಎಲ್‌ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಇಂದೋರ್ ನ್ಯಾಯಾಲಯದ ನ್ಯಾಯಮೂರ್ತಿ ವಿವೇಕ್ ರೂಸಿಯಾ ಮತ್ತು ಬಿನೋದ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡಿದ್ದ ನ್ಯಾಯಪೀಠ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, ವಾದ ಮಂಡಿಸಿದ NHAI ವಕೀಲರು, “ಕೆಲಸ ಇಲ್ಲದೆ ಮನೆಯಿಂದ ಯಾಕೆ ಹೊರಗೆ ಬರುತ್ತೀರಿ. ಯಾಕೆ ಅಷ್ಟು ಬೇಗ ಮನಿಯಿಂದ ಹೊರುತ್ತೀರಿ” ಎಂದು ಹೇಳಿದ್ದು, ನ್ಯಾಯಾಲಯದಲ್ಲಿ ನೆರೆದಿದ್ದವರನ್ನು ನಿಬ್ಬೆರಗುಗೊಳಿಸಿದ್ದಾರೆ.

Advertisements

ಅವರ ಪ್ರಶ್ನೆಯನ್ನು ಖಂಡಿಸಿದ ಅರ್ಜಿದಾರರ ಪರ ವಕೀಲ ಗಿರೀಶ್ ಪಟವರ್ಧನ್, “NHAI ಪರ ವಕೀಲರು ನ್ಯಾಯಾಲಯದಲ್ಲಿ ನಿಂತು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಸಾರ್ವಜನಿಕರು ಮನೆಯಿಂದ ಹೊರ ಬರಲು ಸುರಕ್ಷತೆಯೇ ಇಲ್ಲ. ರಸ್ತೆಗಳು ಸುರಕ್ಷಿತವಾಗಿಲ್ಲ ಎಂಬುದನ್ನು ಅವರು ಧ್ವನಿಸುತ್ತಿದ್ದಾರೆ. ಇಂತಹ ಆಕ್ಷೇಪಾರ್ಹ ಹೇಳಿಕೆಗಳನ್ನು ನ್ಯಾಯಾಲಯವು ಮಾನ್ಯ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಇದೇ ಹೆದ್ದಾರಿಯ ತಿರುವು ರಸ್ತೆ ನಿರ್ಮಾಣ ಕಾಮಗಾರಿಯನ್ನು 4 ವಾರಗಳೊಳಗೆ ಪೂರ್ಣಗೊಳಿಸಿ, ಸಂಚಾರಕ್ಕೆ ತೆರೆಯಬೇಕು ಎಂದು ನ್ಯಾಯಾಲಯವು ನೀಡಿದ್ದ ಆದೇಶವನ್ನೂ ವಕೀಲರು ಕೋರ್ಟ್‌ ಗಮನಕ್ಕೆ ತಂದರು.ನ್ಯಾಯಾಲಯದ ಆದೇಶದ ಹೊರತಾಗಿಯೂ ಕಾಮಗಾರಿ ಈವರೆಗೆ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಅರ್ಜಿದಾರರ ಪರ ವಾಕೀಲರ ವಾದ ಆಲಿಸಿದ ನ್ಯಾಯಾಲಯವು, “ಇಂತಹ ವಿಳಂಬಗಳ ಹಿಂದಿರುವ ತರ್ಕವೇನು” ಎಂದು ಎನ್‌ಎಚ್‌ಎಐಅನ್ನು ಪ್ರಶ್ನಿಸಿತು. ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು. ಪ್ರತಿವಾದಿಗಳು ತಮ್ಮ ಉತ್ತರವನ್ನು ಲಿಖಿತವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ಸೂಚಿಸಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X