40% ಗಿಗ್ ಕಾರ್ಮಿಕರ ಮಾಸಿಕ ದುಡಿಮೆ 15,000 ರೂ.ಗಿಂತ ಕಡಿಮೆ: ಆರ್ಥಿಕ ಸಮೀಕ್ಷೆ

Date:

ಭಾರತದಲ್ಲಿನ ಗಿಗ್ ಕಾರ್ಮಿಕರ ಪೈಕಿ ಸುಮಾರು 40% ಕಾರ್ಮಿಕರು ತಿಂಗಳಿಗೆ 15,000 ರೂ.ಕ್ಕಿಂತಲೂ ಕಡಿಮೆ ಗಳಿಸುತ್ತಾರೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಅವರಿಗೆ ನ್ಯಾಯಯುತ ವೇತನವನ್ನು ಖಚಿತಪಡಿಸಲು ಪ್ರಮುಖ ನೀತಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದೆ. ಅವರು ‘ಆರ್ಡರ್‌’ಗಳಿಗಾಗಿ ಕಾಯುವ ಸಮಯಕ್ಕೂ ಪರಿಹಾರ ಒದಗಿಸಲು ಪ್ರತಿ ಗಂಟೆಗೆ ಇಂತಿಷ್ಟು ಮೊತ್ತವನ್ನು ನಿಗದಿ ಮಾಡಬೇಕೆಂದು ಸೂಚಿಸಿದೆ.

- Advertisement -

ಗುರುವಾರ, ಸಂಸತ್ತಿನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ದುರ್ಬಲ ಗಿಗ್-ಆರ್ಥಿಕ ನೀತಿಗಳು, ಕೌಶಲ್ಯ ಹೊಂದಾಣಿಕೆಯ ಕೊರತೆ ಅಥವಾ ಸುರಕ್ಷತಾ ಜಾಲದ ಕೊರತೆಯಿಂದಾಗಿ ಗಿಗ್‌ ಕಾರ್ಮಿಕರು ಒತ್ತಾಯದಿಂದ ಕೆಲಸ ಮಾಡುವ ವಾತಾವರಣವಿದೆ. ಗಿಗ್‌ ವಲಯವು ವೇಗವಾಗಿ ವಿಸ್ತರಿಸುತ್ತಿರುವಾಗಲೂ ಆದಾಯದ ಏರಿಳಿತ ಕಾಡುತ್ತಿದೆ. ಅನೇಕ ಕಾರ್ಮಿಕರು ‘ಥಿನ್-ಫೈಲ್’ ಸಾಲಗಳನ್ನು ಅವಲಂಬಿಸಿದ್ದಾರೆ ಎಂದು ಸಮೀಕ್ಷೆ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೆಲಸದ ಹಂಚಿಕೆ, ವೇತನ ಮತ್ತು ಕಾರ್ಯಕ್ಷಮತೆ ಮೇಲ್ವಿಚಾರಣೆಯನ್ನು ನಿಯಂತ್ರಿಸುವ ಪ್ಲಾಟ್‌ಫಾರ್ಮ್ ಅಲ್ಗಾರಿದಮ್‌ಗಳ ಕುರಿತು ಸಮೀಕ್ಷೆಯು ಕಳವಳ ವ್ಯಕ್ತಪಡಿಸಿದೆ. ಪಕ್ಷಪಾತ ಮತ್ತು ಕಾರ್ಮಿಕರ ರಕ್ಷಣೆಯಲ್ಲಿ ಸಮಸ್ಯೆಗಳನ್ನು ಗುರುತಿಸಿದೆ.

ಭಾರತದ ಗಿಗ್ ಕಾರ್ಮಿಕರ ಸಂಖ್ಯೆಯು 2025ರ ಆರ್ಥಿಕ ವರ್ಷದಲ್ಲಿ 55% ರಷ್ಟು ಏರಿಕೆಯಾಗಿದ್ದು, 1.2 ಕೋಟಿಗೆ ತಲುಪಿದೆ. ಇದು ಒಟ್ಟು ಉದ್ಯೋಗದ 2% ಕ್ಕಿಂತ ಹೆಚ್ಚಿದೆ. ಕೃಷಿಯೇತರ ಗಿಗ್ ಉದ್ಯೋಗಗಳು 2029-30ರ ವೇಳೆಗೆ ಕಾರ್ಯಪಡೆಯ 6.7% ತಲುಪುವ ನಿರೀಕ್ಷೆಯಿದೆ. ಇದು GDPಗೆ 2.35 ಲಕ್ಷ ಕೋಟಿ ರೂ. ಕೊಡುಗೆ ನೀಡುತ್ತದೆ ಎಂದು ಸಮೀಕ್ಷೆ ವಿವರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...