ಭೋಪಾಲ್ ಅನಿಲ ದುರಂತ ಘಟಿಸಿದ 40 ವರ್ಷಗಳ ನಂತರ ತ್ಯಾಜ್ಯ ವಿಲೇವಾರಿ

Date:

Advertisements

ದೇಶವನ್ನೇ ಬೆಚ್ಚಿ ಬೀಳಿಸಿದ್ದ 1984ರ ಮಧ್ಯ ಪ್ರದೇಶದ ಭೋಪಾಲ್ ಅನಿಲ ದುರಂತ ನಡೆದ 40 ವರ್ಷಗಳ ಬಳಿಕ ಯೂನಿಯನ್ ಕಾರ್ಬೈಡ್ ಕಾರ್ಖಾನೆಯ ಸ್ಥಳದಲ್ಲಿ ಸಂಗ್ರಹವಾಗಿರುವ ಸುಮಾರು 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸ್ಥಳಾಂತರಗೊಳಿಸಲಾಯಿತು.

1984 ರಲ್ಲಿ ಸಂಭವಿಸಿದ ಭೀಕರ ಅನಿಲ ದುರಂತವು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿತ್ತು. ಅನಿಲ ಸೋರಿಕೆಯ ಪರಿಣಾಮ ಸುಮಾರು 6 ಲಕ್ಷ ಮಂದಿ ನಾನಾ ರೀತಿಯ ಕಾಯಿಲೆಗೆ ತುತ್ತಾಗಿದ್ದರು. ಅದೇ ಸಮಯದಲ್ಲಿ, 40 ವರ್ಷಗಳಿಂದ ಯೂನಿಯನ್ ಕಾರ್ಬೈಡ್ ಮತ್ತು ಡೌ ಕೆಮಿಕಲ್ ಕಾರ್ಖಾನೆಗಳಲ್ಲಿ ಬಿದ್ದಿರುವ ರಾಸಾನಿಕ ತ್ಯಾಜ್ಯವು ಭೋಪಾಲ್‌ನ ಹವಾಮಾನವನ್ನೂ ಕಲುಷಿತಗೊಳಿಸುತ್ತಿತ್ತು. ಪರಿಣಾಮ ಕಾರ್ಖಾನೆಯ ಸುತ್ತಲಿನ ಮಣ್ಣು, ಅಂತರ್ಜಲ ಕೂಡ ಕಲುಷಿತವಾಗತೊಡಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ಡಿಸೆಂಬರ್ 3 ರಂದು, ಮಧ್ಯಪ್ರದೇಶ ಹೈಕೋರ್ಟ್ ವಿಷಕಾರಿ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಾಲ್ಕು ವಾರಗಳ ಗಡುವನ್ನು ನೀಡಿತು. ಅಲ್ಲದೆ ಡಿಸೆಂಬರ್ 5 ರಂದು ತ್ಯಾಜ್ಯ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರವನ್ನೂ ತರಾಟೆಗೆ ತೆಗೆದುಕೊಂಡಿತ್ತು. ಘಟನೆ ನಡೆದು ನಲ್ವತ್ತು ವರ್ಷಗಳು ಕಳೆದರೂ ಇನ್ನು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡದಿರುವುದು ದುರಂತ ಈ ವಿಷಕಾರಿ ತ್ಯಾಜ್ಯಗಳು ಭೂಮಿ ಮೇಲೆ ಇದ್ದರೆ ಇನ್ನೂ ಹೆಚ್ಚಿನ ಅನಾಹುತಗಳು ಸಂಭವಿಸಬಹುದು ಎಂದು ಹೈಕೋರ್ಟ್ ಸರಕಾರಕ್ಕೆ ಛೀಮಾರಿ ಹಾಕಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ಬಳಿಕ ವಿಚಾರ ಹೈಕೋರ್ಟ್‌ನ ಆದೇಶದ ಮೇರೆಗೆ ಸುಮಾರು 40 ವರ್ಷಗಳ ಬಳಿಕ ಈ ತ್ಯಾಜ್ಯವನ್ನು ಭೋಪಾಲ್‌ನಿಂದ 250 ಕಿ.ಮೀ. ದೂರವಿರುವ ಕೈಗಾರಿಕಾ ಪ್ರದೇಶವಾದ ದಾರ್ ಜಿಲ್ಲೆಯ ಪೀತಂಪುರಕ್ಕೆ ಸುಮಾರು ಹನ್ನೆರಡು ಟ್ರಕ್‌ಗಳ ಮೂಲಕ ಬುಧವಾರ ಸಾಗಿಸಲಾಗಿದೆ.

ಸುಮಾರು 40 ವರ್ಷಗಳಿಂದ ಕೈಗಾರಿಕಾ ಪ್ರದೇಶದಲ್ಲಿ ಬಿದ್ದಿದ್ದ 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜಗಳನ್ನು ಸುರಕ್ಷತಾ ಮಾನದಂಡಗಳನ್ನು(ಪಿಪಿಇ ಕಿಟ್) ಅನುಸರಿಸುವ ಮೂಲಕ ಸುಮಾರು 200 ಕಾರ್ಮಿಕರನ್ನು ಬಳಸಿಕೊಂಡು ತ್ಯಾಜ್ಯವನ್ನು ಸಂಗ್ರಹ ಮಾಡಲಾಗಿದ್ದು ಅದಕ್ಕಾಗಿ ಸುಮಾರು ಹನ್ನೆರಡು ಕಂಟೈನರ್‌ಗಳನ್ನು ಬಳಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆಯನ್ನು ಒದಗಿಸುವ ಮೂಲಕ ಬುಧವಾರ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಪೀತಂಪುರಕ್ಕೆ ಕೊಂಡೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X