ಮಧ್ಯಪ್ರದೇಶ| ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ, ರಕ್ಷಣಾ ಕಾರ್ಯ ಪ್ರಾರಂಭ

Date:

Advertisements

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಆರು ವರ್ಷದ ಬಾಲಕ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ರೇವಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್, “ಆರು ವರ್ಷದ ಬಾಲಕ ಬಿದ್ದು ಪ್ರಸ್ತುತ ಸಿಕ್ಕಿಬಿದ್ದಿರುವ ಈ ಬೋರ್‌ವೆಲ್ 6 ಸೆಂಟಿ ಮೀಟರ್ ವ್ಯಾಸವನ್ನು ಹೊಂದಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬಾಲಕ ತನ್ನ ಸ್ನೇಹಿತರೊಂದಿಗೆ ಕಟಾವು ಮಾಡಿದ ಗೋಧಿ ಹೊಲದಲ್ಲಿ ಆಟವಾಡುತ್ತಿದ್ದನು, ಈ ಸಮಯದಲ್ಲಿ ಅವನು ಬೋರ್‌ವೆಲ್‌ಗೆ ಬಿದಿದ್ದಾನೆ. ಇತರ ಮಕ್ಕಳು ಬಾಲಕನನ್ನು ಮೇಲೆತ್ತಲು ಪ್ರಯತ್ನಿಸಿದ್ದು ಸಾಧ್ಯವಾಗದಿದ್ದಾಗ, ತಕ್ಷಣವೇ ಬಾಲಕನ ಪೋಷಕರಿಗೆ ಮಾಹಿತಿ ನೀಡಿದರು” ಎಂದು ತಿಳಿಸಿದ್ದಾರೆ.

Advertisements

“ಬಾಲಕನ ಪೋಷಕರು ಪೊಲೀಸರು ಮತ್ತು ಆಡಳಿತಕ್ಕೆ ಮಾಹಿತಿ ನೀಡಿದ್ದು ತಕ್ಷಣ ಠಾಣೆಯ ಉಸ್ತುವಾರಿ ಹಾಗೂ ಎಸ್‌ಡಿಎಂ ಸ್ಥಳಕ್ಕೆ ಆಗಮಿಸಿದರು. ಮಧ್ಯಾಹ್ನ 3.30ರ ವೇಳೆಗೆ ಈ ಘಟನೆ ಸಂಭವಿಸಿದ್ದು ಸ್ಥಳದಲ್ಲಿ ಎಲ್ಲ ಹಿರಿಯ ಅಧಿಕಾರಿಗಳು ಹಾಜರಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೊಳವೆಬಾವಿ ದುರಂತ | ಸತತ 18 ಗಂಟೆ ನಿರಂತರ ಕಾರ್ಯಾಚರಣೆಯ ನಂತರ ಬಾಲಕನ ರಕ್ಷಣೆ

“2 ಜೆಸಿಬಿಗಳು, ಕ್ಯಾಮರಾಮನ್‌ಗಳ ತಂಡ ಮತ್ತು ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯ ನಡೆಸುತ್ತಿದೆ. ಬನಾರಸ್‌ನಿಂದ ಎನ್‌ಡಿಆರ್‌ಎಫ್ ತಂಡವನ್ನು ಕಳುಹಿಸಲಾಗಿದೆ ಮತ್ತು ಅವರು ಶೀಘ್ರದಲ್ಲೇ ಇಲ್ಲಿಗೆ ಬರಲಿದ್ದಾರೆ” ಎಂದು ತಿಳಿಸಿದರು.

ಇತ್ತೀಚೆಗೆ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X