ಜಾರ್ಖಂಡ್ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೆ ಯತ್ನಿಸಿದ ದುರುಳ

Date:

Advertisements

ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ಸೋದರಸಂಬಂಧಿಯೇ ಅತ್ಯಾಚಾರ ಎಸಗಿ, ಬಾಲಕಿಯ ಕೊಲೆ ಮಾಡಲು ಯತ್ನಿಸಿರುವ ಘಟನೆ ಜಾರ್ಖಂಡ್‌ನ ಸಿಮ್ದೇಗಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 20 ವರ್ಷದ ಆರೋಪಿ ಕುಡಿದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಲಕಿಗೆ ಸಿಹಿತಿಂಡಿ ನೀಡುವುದಾಗಿ ಪುಸಲಾಯಿಸಿ ಯಾರೂ ಇಲ್ಲದ ಅಂಗನವಾಡಿ ಕೇಂದ್ರವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಮಹಿಳೆಯ ಮೇಲೆ ಅತ್ಯಾಚಾರ; ಬಜರಂಗದಳ ನಾಯಕ ಬಂಧನ

Advertisements

ಕಾಮುಕ ಅತ್ಯಾಚಾರ ನಡೆಸಿದ ಬಳಿಕ ಬಾಲಕಿಯ ಕತ್ತು ಹಿಸುಕಿ ಕೊಲ್ಲಲು ಯತ್ನಿಸುತ್ತಿದ್ದ. ಅಷ್ಟರಲ್ಲೇ ಹತ್ತಿರದ ಮಾರ್ಗದಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆತನನ್ನು ತಡೆದಿದ್ದಾರೆ. ಬಾಲಕಿ ಮನೆಗೆ ಹಿಂತಿರುಗಿ ಘಟನೆಯನ್ನು ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಗ್ರಾಮದ ಮುಖ್ಯಸ್ಥ ಮತ್ತು ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆರೋಪಿಯನ್ನು ಬಂಧಿಸಿದ್ದು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಲ್ದೇಗಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಬಿಜೆಪಿ ಮುಖಂಡ; ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಆರೋಪಿ

ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ

ಮಕ್ಕಳ ಹಕ್ಕುಗಳ ಎನ್‌ಜಿಒ CRY ನಡೆಸಿದ ಸಮೀಕ್ಷೆ ಪ್ರಕಾರ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು 2016ರಿಂದ 2022ರವರೆಗೆ ಶೇ. 96ರಷ್ಟು ಏರಿಕೆಯಾಗಿದೆ. 2022ರಲ್ಲಿಯೇ 38,911 ಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳು ನಡೆದಿದೆ. 2021ರಲ್ಲಿ 36,381 ಪ್ರಕರಣಗಳು ದಾಖಲಾಗಿವೆ. ಇದನ್ನು ಹೊರತುಪಡಿಸಿ ದಾಖಲಾಗದ ಅದೆಷ್ಟೋ ಪ್ರಕರಣಗಳಿವೆ. ತಮ್ಮ ಬಾಲ್ಯದ ಜೀವನದ ಆಘಾತದಿಂದ ಹೊರಬರಲಾರದೆ ಇನ್ನೂ ಕೂಡಾ ಹಲವು ಮಹಿಳೆಯರು, ಹೆಣ್ಣು ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X