ಮುಂಬೈನ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ

Date:

Advertisements

ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಈ ಘಟನೆ ಸಂಭವಿಸಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು.

Advertisements

ದೀಪಾವಳಿ ಆದ ಕಾರಣ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ರೈಲು ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಇವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

ಬಾಂದ್ರಾದಿಂದ ಗೋರಖ್​ಪುರಕ್ಕೆ ತೆರಳುತ್ತಿದ್ದ 22921 ಸಂಖ್ಯೆಯ ರೈಲಿನಲ್ಲಿ ಅವಘಡ ಸಂಭವಿಸಿದ ದೃಶ್ಯ ಹರಿದಾಡುತ್ತಿದೆ. ಒಂದನೇ ಪ್ಲಾಟ್​ಫಾರ್ಮ್​ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿವೆ. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿರುವುದನ್ನು ದೃಶ್ಯಗಳಲ್ಲಿ ಕಂಡುಬಂದಿವೆ.

ಮುಂಬೈನ ರೈಲು ನಿಲ್ದಾಣಗಳು ಕಾಲ್ತುಳಿತ ಘಟನೆಗಳಿಗೆ ಕುಖ್ಯಾತಿ ಪಡೆದಿವೆ. ಅಲ್ಲಿಯ ಹೆಚ್ಚಿನ ರೈಲುಗಳು ಸದಾ ಕಿಕ್ಕಿರಿದಿರುತ್ತವೆ. 2017ರ ಘಟನೆಯಲ್ಲಿ 23 ಮಂದಿ ಅಸುನೀಗಿದ್ದರು. ಎಲ್ಫಿನ್​ಸ್ಟೋನ್ ರೋಡ್ ರೈಲ್ವೆ ನಿಲ್ದಾಣದ ಕಾಲ್ಸೇತುವೆಯೊಂದರಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತವಾಗಿ 23 ಮಂದಿ ಪ್ರಾಣ ಕಳೆದುಕೊಂಡು, 39 ಮಂದಿಗೆ ಗಾಯಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X