ತಮಾಷೆ ಮಾಡಿದ್ದಕ್ಕೆ 9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ ಹತ್ಯೆ

Date:

Advertisements

ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ದುರ್ಘಟನೆ ನಡೆದಿದೆ. ಹತ್ಯೆಗೆ ಬಲಿಯಾದ ಬಾಲಕಿಯನ್ನು ಮೋಹಿನಿ ಶ್ರೀವಾಸ್ ಎಂದು ಗುರುತಿಸಲಾಗಿದೆ.

ಬಾಲಕಿ ಮೋಹಿನಿ ಮತ್ತು ಆಕೆಯ ಅಣ್ಣ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ, ದುಷ್ಕರ್ಮಿ ದಾಳಿ ನಡೆಸಿದ್ದಾನೆ. ಬಾಲಕಿಯ ಅಣ್ಣನ ಮೇಲೂ ದಾಳಿ ನಡೆದಿದ್ದು, ಆತನಿಗೆ ಗಾಯಗಳಾಗಿವೆ. ದುಷ್ಕರ್ಮಿಯು ಬಾಲಕಿಯನ್ನು ಬಾವಿಗೆ ತಳ್ಳಿ, ಬಳಿಕ ಮೇಲಿನಿಂದ ಕಲ್ಲು ಹಾಕಿದ್ದಾನೆ ಎಂದು ವರದಿಯಾಗಿದೆ.

Advertisements

ಆರೋಪಿ ಗೋವರ್ಧನ್ ಪಟೇಲ್ ಮತ್ತು ಬಾಲಕಿ ಒಂದೇ ಗ್ರಾಮದವರಾಗಿದ್ದಾರೆ. ಈ ಹಿಂದೆ, ಆರೋಪಿಯ ಬಗ್ಗೆ ಬಾಲಕಿ ತಮಾಷೆ ಮಾಡಿದ್ದಳು. ಇದರಿಂದ ಕೋಪಕೊಂಡಿದ್ದ ದುಷ್ಕರ್ಮಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ವರದಿಯಾಗಿದೆ.

ಬಾಲಕಿಯ ಮೃತದೇಹವನ್ನು ಬಾವಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ, ತಾನೇ ಹತ್ಯೆಗೈದಿದ್ದಾಗಿ ಗೋವರ್ಧನ್ ತಪ್ಪೊಪ್ಪಿಕೊಂಡಿದ್ದಾನೆ. ಬಾಲಿಯ ಸಹೋದರ ತಪ್ಪಿಸಿಕೊಳ್ಳದಿದ್ದರೆ, ಆತನನ್ನೂ ಕೊಲ್ಲುತ್ತಿದ್ದೆ ಎಂದು ಆರೋಪಿ ಹೇಳಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X