ಮಧ್ಯಪ್ರದೇಶದಲ್ಲಿ ಆಯ್ಕೆಯಾದ ಶಾಸಕರಲ್ಲಿ 90 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

Date:

Advertisements

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಆಯ್ಕೆಯಾದ 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

” 230 ಅಭ್ಯರ್ಥಿಗಳಲ್ಲಿ 90 ವಿಜೇತ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಅದೇ ರೀತಿ 34 ವಿಜೇತ ಅಭ್ಯರ್ಥಿಗಳು ಅಂದರೆ ಸುಮಾರು ಶೇ. 15 ರಷ್ಟು ಜನರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ” ಎಂದು ಎಡಿಆರ್ ವರದಿ ಹೇಳುತ್ತದೆ.

ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಈ 90 ಶಾಸಕರಲ್ಲಿ 51 ಮಂದಿ ಬಿಜೆಪಿ, 38 ಕಾಂಗ್ರೆಸ್‌ಗೆ ಸೇರಿದವರು ಮತ್ತು ಒಬ್ಬರು ಭಾರತೀಯ ಆದಿವಾಸಿ ಪಕ್ಷದವರು ಎಂದು ವರದಿಯಲ್ಲಿ ತಿಳಿಸಿದೆ. ಹಿಂದಿನ 2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಅಂಕಿಅಂಶದಲ್ಲಿ ಸ್ವಲ್ಪ ಇಳಿಕೆಯಾಗಿದೆ. 2018 ರಲ್ಲಿ 230 ಶಾಸಕರಲ್ಲಿ 94 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಮಧ್ಯಪ್ರದೇಶ ರಾಜ್ಯದಲ್ಲಿ ನೂತನವಾಗಿ ಚುನಾಯಿತರಾದ 205 ಶಾಸಕರು(ಶೇ.89) ‘ಕೋಟ್ಯಾಧಿಪತಿಗಳು’. ಈ ಕೋಟ್ಯಾಧಿಪತಿಗಳ ಪೈಕಿ 144 ಮಂದಿ ಬಿಜೆಪಿ ಹಾಗೂ 61 ಮಂದಿ ಕಾಂಗ್ರೆಸ್‌ಗೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ರಾಜ್ಯದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಾಗಿದೆ. 2018 ರ ವಿಧಾನಸಭಾ ಚುನಾವಣೆಯಲ್ಲಿ 187 ಶಾಸಕರು ಕೋಟ್ಯಾಧಿಪತಿಗಳಾಗಿದ್ದರು.

ಆಯ್ಕೆಯಾದವರಲ್ಲಿ 161 ವಿಜೇತ ಅಭ್ಯರ್ಥಿಗಳು ಪದವೀಧರರು ಅಥವಾ ಶೈಕ್ಷಣಿಕ ಅರ್ಹತೆಗಿಂತ ಹೆಚ್ಚಿನವರು. ಅದೇ ರೀತಿ, 64 ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯನ್ನು 5 ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿಕೊಂಡಿದ್ದಾರೆ.

230 ಕ್ಷೇತ್ರಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಿದರೆ, ಕಾಂಗ್ರೆಸ್ 66 ಸ್ಥಾನ ಹಾಗೂ ಭಾರತ್ ಆದಿವಾಸಿ ಪಕ್ಷವು ಒಂದು ಸ್ಥಾನವನ್ನು ಗೆದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X