ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ ಆರೋಪ

Date:

Advertisements

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಯಿಳಿ ಆರೋಪಿಸಿದ್ದಾರೆ.

ಚೆನ್ನೈನ ಶಾಲಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾಷಾ ಕಲಿಕೆ ವಿದ್ಯಾರ್ಥಿಗಳ ಆಯ್ಕೆಯಾಗಿರಬೇಕು. ಮೂರನೇ ಭಾಷೆ ಕಡ್ಡಾಯವಲ್ಲ, ಅದು ಒಂದು ಆಯ್ಕೆಯಾಗಿರಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

Advertisements

ಕೇಂದ್ರ ಸರ್ಕಾರವು ತಮಿಳುನಾಡು ಮತ್ತು ಕೇರಳದಂತಹ ಉತ್ತಮ ಸಾಧನೆ ಮಾಡಿದ ರಾಜ್ಯಗಳಿಗೆ ಶಿಕ್ಷಣದ ನಿಧಿಯನ್ನು ತಡೆಹಿಡಿಯುತ್ತಿದೆ. ಕೇಂದ್ರ ಸರ್ಕಾರವು ಶಿಕ್ಷಣ ನಿಧಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯಗಳಿಗೆ ಬೆದರಿಕೆ ಹಾಕುತ್ತಿದೆ. ಆದರೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಶಿಕ್ಷಣ ನಿಧಿಯ ಪೂರ್ಣ ವೆಚ್ಚವನ್ನು ತಮ್ಮ ರಾಜ್ಯ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅನ್ಬಿಲ್ ಮಹೇಶ್ ಹೇಳಿದರು.

ಒಂದು ದಿನದ ಹಿಂದಷ್ಟೆ ಭಾಷಾ ವಿಚಾರವಾಗಿ ಮಾತನಾಡಿದ್ದ ಡಿಎಂಕೆ ಸಂಸದೆ ಕನಿಮೋಳಿ, ಹಿಂದಿ ಯಾವುದೇ ಭಾಷೆಯ ಶತ್ರು ಅಲ್ಲದಿದ್ದರೆ, ತಮಿಳು ಕೂಡ ಅಲ್ಲ ಎಂದು ಹೇಳಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಯಾವುದೇ ಭಾಷೆಯ ಶತ್ರುವಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ತಮಿಳು ಕೂಡ ಯಾವುದೇ ಭಾಷೆಯ ಶತ್ರುವಲ್ಲ. ಉತ್ತರ ಭಾರತದ ಜನರು ದಕ್ಷಿಣ ಭಾರತದ ಭಾಷೆಗಳನ್ನು ಕಲಿಯಬೇಕು ಎಂದು ಕನಿಮೋಳಿ ಒತ್ತಾಯಿಸಿದ್ದರು.

“ಹಿಂದಿ ಯಾವುದೇ ಭಾಷೆಯ ಶತ್ರುವಲ್ಲದಿದ್ದರೆ, ತಮಿಳು ಕೂಡ ಯಾವುದೇ ಭಾಷೆಯ ಶತ್ರುವಲ್ಲ. ಅವರು ತಮಿಳನ್ನು ಕಲಿಯಲಿ. ಉತ್ತರ ಭಾರತದ ಜನರು ಕನಿಷ್ಠ ಒಂದು ದಕ್ಷಿಣ ಭಾರತದ ಭಾಷೆಯನ್ನಾದರೂ ಕಲಿಯಲಿ. ಅದೇ ನಿಜವಾದ ರಾಷ್ಟ್ರೀಯ ಏಕೀಕರಣ” ಎಂದು ಕನಿಮೋಳಿ ಹೇಳಿದ್ದರು.

ಇತ್ತೀಚೆಗೆ ಅಮಿತ್ ಶಾ ಅವರು ಹಿಂದಿ ಯಾವುದೇ ಭಾರತೀಯ ಭಾಷೆಯ ವಿರೋಧಿಯಲ್ಲ, ಬದಲಿಗೆ ಎಲ್ಲರ ಸ್ನೇಹಿತ. ದೇಶದಲ್ಲಿ ಯಾವುದೇ ಭಾಷೆಗೆ ವಿರೋಧ ಇರಬಾರದು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X