ಹಾಡು ಹಾಡಿ ಸಂಚಾರ ನಿಯಮಗಳ ಜಾಗೃತಿ ಮೂಡಿಸುವ 10ರ ಬಾಲಕ!

Date:

Advertisements

ಮಧ್ಯಪ್ರದೇಶದ ಇಂದೋರ್‌ನಲ್ಲಿ ಆದಿತ್ಯ ತಿವಾರಿ ಎಂಬ 10 ವರ್ಷದ ಬಾಲಕ ತಾನೇ ಹಾಡು ಸಂಯೋಜನೆ ಮಾಡಿ ಆ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾನೆ.

ಟ್ರಾಫಿಕ್ ಸಿಗ್ನಲ್‌ನಲ್ಲಿಯೇ ನಿಂತು ಸಂಚಾರ ಪೊಲೀಸರಂತೆ ಓಡಾಡಿಕೊಂಡು, ಹಾಡುತ್ತಾ, ನಿಯಮ ಉಲ್ಲಂಘಿಸುವವರಿಗೆ ಬುದ್ದಿ ಹೇಳುತ್ತಾ ಜನರಿಗೆ ಸಂಚಾರ ನಿಯಮಗಳ ಬಗ್ಗೆ ಬಾಲಕ ಜಾಗೃತಿ ಮೂಡಿಸುತ್ತಿದ್ದಾನೆ.

ಸಿನಿಮಾ ಹಾಡುಗಳಿಗೆ ಸಂಚಾರ ನಿಯಮಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಸೇರಿಸಿ ಈ ಬಾಲಕ ಹಾಡುತ್ತಾನೆ. ಹಾಗೆಯೇ ಹೆಲ್ಮೆಟ್ ಧರಿಸದೆ ಸಂಚರಿಸುವವರ ಬಳಿ ಹೋಗಿ ಸಂಚಾರಿ ನಿಯಮ ಪಾಲಿಸುವಂತೆ ಮನವಿ ಮಾಡುವ ಚೀಟಿಯೊಂದನ್ನು ನೀಡುತ್ತಾನೆ. ಜೊತೆಗೆ ಚಾಕೊಲೇಟ್ ನೀಡಿ ನಿಯಮ ಪಾಲಿಸುವಂತೆ ಮನವಿ ಮಾಡುತ್ತಾನೆ ಈ ಬಾಲಕ.

Advertisements

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಆದಿತ್ಯ ತಿವಾರಿ, “ನಾನು ಕಳೆದ ಮೂರು ವರ್ಷಗಳಿಂದ ಟ್ರಾಫಿಕ್ ಅನ್ನು ನಿರ್ವಹಿಸುತ್ತಿದ್ದೇನೆ. ನನ್ನ ಸಹೋದರಿ ‘ನೋ ಸ್ಮೋಕಿಂಗ್’ ಅಭಿಯಾನವನ್ನು ನಡೆಸುತ್ತಿದ್ದಳು. ಅವಳನ್ನು ನೋಡಿ ನನಗೂ ದೇಶ ಸೇವೆ ಮಾಡುವ ಮನೋಭಾವ ಬಂದಿದೆ. ಅದರಿಂದಾಗಿ ನಾನು ರಸ್ತೆಗಳಿದು ಸಂಚಾರ ನಿಯಮ ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾನೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

“ನಾನು ರಚಿಸಿದ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತೇನೆ. ಸ್ವಚ್ಛತೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿದ್ದಂತೆ ಸಂಚಾರ ನಿಯಮಗಳ ಅನುಸರಣೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿರಬೇಕೆಂದು ನಾನು ಬಯಸುತ್ತೇನೆ. ನಾನು ದೊಡ್ಡವನಾದಾಗ ಅಂತಹ ಸೈನಿಕನಾಗಲು ಬಯಸುತ್ತೇನೆ” ಎಂದು ಆದಿತ್ಯ ತಿವಾರಿ ಹೇಳಿದ್ದಾನೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X