ಸತೀಶ್ ಆಚಾರ್ಯ, ಮಂಜುಲ್ ಕಾರ್ಟೂನ್‌ಗಳಿಂದ ಭಾರತದ ಕಾನೂನು ಉಲ್ಲಂಘನೆ: ಮುಂಬೈ ಪೊಲೀಸರಿಂದ ನೋಟಿಸ್

Date:

Advertisements


ಕಳೆದ ವಾರ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳು ಭಾರತದ ಮಾಹಿತಿ ತಂತ್ರಜ್ಞಾನದ ಕಾನೂನುಗಳನ್ನು ಉಲ್ಲಂಘಿಸುತ್ತವೆ ಎಂದು ತಿಳಿಸಲಾಗಿದೆ.

ವಾಷಿಂಗ್ಟನ್‌ ಪೋಸ್ಟ್ ನ ಮಾಲೀಕ ಜೆಫ್ ಬೆಜೋಸ್ ಮತ್ತು ಬಿಲಿಯನರ್ ಮಾರ್ಕ್ ಝುಕರ್ಬರ್ಗ್ ಟ್ರಂಪ್ ಗೆ ತಲೆಬಾಗುವ ತನ್ನ ವ್ಯಂಗ್ಯಚಿತ್ರವನ್ನು ವಾಷಿಂಗ್ಟನ್‌ ಪೋಸ್ಟ್ ತಿರಸ್ಕರಿಸಿದ ಬೆನ್ನಲ್ಲೇ ಪುಲಿಟ್ಜರ್ ವಿಜೇತ ವ್ಯಂಗ್ಯಚಿತ್ರಕಾರ್ತಿ ಆನ್ ಟೆಲ್ನೇಸ್ ರಾಜೀನಾಮೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಭಾರತದಲ್ಲಿ ಈ ಬೆಳವಣಿಗೆ ಬೆಳಕಿಗೆ ಬಂದಿದೆ ಎಂದು ಟೆಲಿಗ್ರಾಪ್‌ ಇಂಡಿಯಾ ವರದಿ ಮಾಡಿದೆ.

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆ ʼಎಕ್ಸ್ʼ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳಿಗೆ ಮುಂಬೈನ ಪೊಲೀಸರಿಂದ ಆಕ್ಷೇಪಣೆ ಬಂದಿದೆ ಎಂದು ತಿಳಿಸಿದೆ.

Advertisements

ವ್ಯಂಗ್ಯ ಚಿತ್ರಕಾರ ಸತೀಶ್ ಆಚಾರ್ಯ ತನಗೆ ಎಕ್ಸ್ ನಿಂದ ಬಂದ ನೋಟಿಸ್ ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ನೋಟಿಸ್‌ನ ಸ್ಕ್ರೀನ್ ಶಾಟ್‌ಗಳನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ʼನಿಮ್ಮ ಎಕ್ಸ್ ಖಾತೆ @safishacharya ಭಾರತದ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಮುಂಬೈ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ. ಖಾತೆಯಿಂದ ವಿಷಯವನ್ನು ತೆಗೆದುಹಾಕಲು ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆಗಳಿಂದ ಸೂಚನೆ ಸ್ವೀಕರಿಸಿದರೆ ನಮ್ಮ ಬಳಕೆದಾರರಿಗೆ ತಿಳಿಸುವುದು ನಮ್ಮ ನೀತಿಯಾಗಿದೆ. ಈ ರೀತಿಯ ಸೂಚನೆಯನ್ನು ಸ್ವೀಕರಿಸುವುದರಿಂದ ನಿಮಗೆ ಗೊಂದಲದ ಅನುಭವವಾಗಿರಬಹುದು. ನಿಮ್ಮ ಹಿತಾಸಕ್ತಿಗಳನ್ನು ಕಾಪಾಡಲು ನೀವು ಪರ್ಯಾಯ ಹಾದಿಯನ್ನು ಕಂಡುಕೊಳ್ಳಬಹುದು. ನ್ಯಾಯಾಲಯದಲ್ಲಿ ಸೂಚನೆಯನ್ನು ಪ್ರಶ್ನಿಸಬಹುದು, ನಾಗರಿಕ ಸಮಾಜ ಸಂಸ್ಥೆಗಳನ್ನು ಸಂಪರ್ಕಿಸಬಹುದು. ವಿಷಯವನ್ನು ಸ್ವಯಂಪ್ರೇರಣೆಯಿಂದ ಅಳಿಸಬಹುದು ಅಥವಾ ಬೇರೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಬಹುದಾಗಿದೆ’ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಮಂಜುಲ್ ಅವರಿಗೆ ಕೂಡ ಇದೇ ರೀತಿಯ ನೋಟಿಸ್ ನೀಡಲಾಗಿದೆ. ಸತೀಶ್ ಆಚಾರ್ಯ ಅಥವಾ ಮಂಜುಲ್ ವಿರುದ್ಧ ಈ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಅವರ ಪೋಸ್ಟ್ ಹೇಗೆ ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ತಿಳಿಯಲು ಎಕ್ಸ್ ಅನ್ನು ಕೂಡ ಅವರು ಸಂಪರ್ಕಿಸಿಲ್ಲ. ಆದರೆ, ಇಬ್ಬರೂ ನಾವು ಈ ಬಗ್ಗೆ ಭಯಪಡುವುದಿಲ್ಲಎಂದು ಹೇಳಿರುವುದಾಗಿ ಟೆಲಿಗ್ರಾಪ್ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ, ಭಾರತದ ಸಂವಿಧಾನವು ವ್ಯಂಗ್ಯಚಿತ್ರಗಳ ಮೂಲಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ನನಗೆ ನೀಡಿದೆ. ಅಧಿಕಾರದಲ್ಲಿರುವ ಜನರು ಕಾರ್ಟೂನ್ ಗಳನ್ನು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ, ಅವರು ವ್ಯಂಗ್ಯಚಿತ್ರಕಾರರ ಪ್ರಶ್ನಿಸುವ, ವಿಮರ್ಶೆಯ ಹಕ್ಕನ್ನು
ಕಸಿದುಕೊಳ್ಳಲು ಸಾಧ್ಯವಿಲ್ಲ ಮತ್ತು ಕಾರ್ಟೂನ್‌ ಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತರು, ವ್ಯಂಗ್ಯಚಿತ್ರಕಾರರು ಆಕ್ಷೇಪಣೆಗಳನ್ನು ಎದುರಿಸುವುದು ಸರ್ವೆ ಸಾಮಾನ್ಯವಾಗಿದೆ. ಸಂಪಾದಕೀಯ ವ್ಯಂಗ್ಯಚಿತ್ರಗಳ ಮೂಲಕ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸುವ ವ್ಯಂಗ್ಯಚಿತ್ರಕಾರರ ಶ್ರೀಮಂತ ಪರಂಪರೆಯನ್ನು ಭಾರತ ಹೊಂದಿದೆ. ಸರ್ಕಾರ, ಸ್ಥಾಪನೆ, ನೀತಿಗಳನ್ನು, ನಾಯಕರನ್ನು ಪ್ರಶ್ನಿಸುವುದು ವ್ಯಂಗ್ಯಚಿತ್ರಕಾರನ ಕೆಲಸ ಮತ್ತು ಕರ್ತವ್ಯ. ವೃತ್ತಿಪರ ವ್ಯಂಗ್ಯಚಿತ್ರಕಾರನಾಗಿ ಕಳೆದ ಎರಡು ದಶಕಗಳಿಂದ ನಾನು ಅದೇ ಕೆಲಸವನ್ನು ಮಾಡುತ್ತಿದ್ದೇನೆ. ಅಧಿಕಾರದಲ್ಲಿರುವ ಪಕ್ಷ, ಅಧಿಕಾರದಲ್ಲಿರುವ ಜನರು ಬದಲಾಗಬಹುದು. ಆದರೆ ಸರ್ಕಾರವನ್ನು ಪ್ರಶ್ನಿಸುವ ವ್ಯಂಗ್ಯಚಿತ್ರಕಾರನ ನಿಲುವು ಬದಲಾಗುವುದಿಲ್ಲ ಎಂದು ಸತೀಶ್ ಆಚಾರ್ಯ ಹೇಳಿದ್ದಾರೆ.

ವ್ಯಂಗ್ಯಚಿತ್ರಕಾರ ಮಂಜುಲ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾವು ಭಯಪಡುವುದಿಲ್ಲ. ಈ ಸೂಚನೆಯು ಪಾರದರ್ಶಕತೆ ಮತ್ತು ಪ್ರಕ್ರಿಯೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಇಂತಹ ಸೂಚನೆಗಳು ಮುಕ್ತ ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಅನೇಕ ವ್ಯಂಗ್ಯಚಿತ್ರ ರಚನೆಕಾರರು ಮತ್ತು ಪತ್ರಕರ್ತರು ಸೂಕ್ಷ್ಮ ವಿಷಯಗಳಿಂದ ದೂರ ಸರಿಯುತ್ತಾರೆ. ಸೂಕ್ಷ್ಮ ವಿಷಯಗಳಿಂದಾಗುವ ಪರಿಣಾಮಗಳ ಬಗ್ಗೆ ಭಯಪಡುತ್ತಾರೆ ಎಂದು ಮಂಜುಲ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X