ರಾಜಸ್ಥಾನ | ನಾಪತ್ತೆಯಾದ ವಧುವಿಗಾಗಿ ಮಂಟಪದಲ್ಲೇ 13 ದಿನ ಕಾದು ವಿವಾಹವಾದ ವರ

Date:

  • ರಾಜಸ್ಥಾನ ಗ್ರಾಮದಲ್ಲಿ ಮೇ 3ರಂದು ನಿಶ್ಚಯವಾಗಿದ್ದ ವಿವಾಹ
  • ಮೇ 15ರಂದು ವಧು ದೊರಕಿದ ನಂತರ ಆಕೆಯೊಂದಿಗೆ ವಿವಾಹ

ರಾಜಸ್ಥಾನ ಗ್ರಾಮವೊಂದರಲ್ಲಿ ವಿವಾಹದ ದಿನದ ಶಾಸ್ತ್ರಗಳು ಆರಂಭವಾದ ನಂತರ ವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾದ ಮೇಲೆ ವರ ವಧುವಿಗಾಗಿ 13 ದಿನಗಳ ಕಾಲ ಮಂಟಪದಲ್ಲೇ ಕಾದಿದ್ದಾನೆ.

- Advertisement -

13 ದಿನಗಳ ನಂತರ ಕೊನೆಗೂ ಮಂಟಪಕ್ಕೆ ಆಗಮಿಸಿದ ವಧುವಿನೊಂದಿಗೆ ವಿವಾಹ ನೆರವೇರಿದೆ. ಇಂತಹ ವಿಚಿತ್ರ ಮದುವೆ ಇದೀಗ ರಾಜಸ್ಥಾನ ಸೇರಿದಂತೆ ದೇಶವಿಡೀ ಸುದ್ದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜ್ಯದ ಸೈನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇ 3ರಂದು ವಿವಾಹ ನಿಶ್ಚಯವಾಗಿತ್ತು. ಆದರೆ ವಧು ಸೃಷ್ಟಿಸಿದ ಗೊಂದಲದಿಂದ ವಿವಾಹ ಮೇ 15ಕ್ಕೆ ನೆರವೇರಿದೆ.

ಆಗಿದ್ದೇನು?

ಮೇ 3ರಂದು ವಿವಾಹ ನೆರವೇರಿಸಲು ನಿಶ್ಚಯಿಸಲಾಗಿದ್ದು, ವಧು, ವರ ಹಾಗೂ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದರು.

ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುತ್ತಿರುವುದಾಗಿ ಹೇಳಿ ತೆರಳಿದಾಕೆ, ಎಷ್ಟು ಸಮಯವಾದರೂ ಹಿಂತಿರುಗಿ ಬರಲಿಲ್ಲ. ಅನುಮಾನದಿಂದ ವಧುವಿನ ಪೋಷಕರು ಮಂಟಪ ಹುಡುಕಿದರು.

ಸ್ವಲ್ಪ ಸಮಯದ ಬಳಿ ಆಕೆ ತನ್ನ ಪ್ರಿಯಕರನೊಂದಿಗೆ ಮಂಟಪ ಬಿಟ್ಟು ತೆರಳಿರುವುದಾಗಿ ತಿಳಿದು ಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳವರೆಗೆ ಮದುವೆ ಮಂಟಪದಲ್ಲೇ ಕುಳಿತಿದ್ದ.

ಈ ಸುದ್ದಿ ಓದಿದ್ದೀರಾ? ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ನಡೆಸಿದ್ದರು. ರಾಜಸ್ಥಾನ ಪೊಲೀಸರು ಮೇ 15ರಂದು ವಧುವನ್ನು ಪತ್ತೆಹಚ್ಚಿದ್ದಾರೆ. ನಂತರ ಮಗಳ ಮನಸ್ಸು ಒಲಿಸುವಲ್ಲಿ ಆಕೆಯ ಪೋಷಕರು ಯಶಸ್ವಿಯಾದರು. ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಲಾಯಿತು.

ವಧು ಹಿಂತಿರುಗಿ ಬಂದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ವಿವಾಹದ ನಂತರ ವಧು-ವರ ಸಂತಸವಾಗಿದ್ದಾರೆ ಎಂದು ಹೇಳಲಾಗಿದೆ. ಮಂಟಪದಲ್ಲಿದ್ದ ವಧು ಇಷ್ಟು ದಿನಗಳ ಕಾಲ ಎಲ್ಲಿ ಹೋಗಿದ್ದಳು ಎಂದು ಚರ್ಚೆ ಆರಂಭವಾಗಿತ್ತು.

ಬಳಿಕ ವಧು ಮತ್ತು ವರನ ಮನೆಯವರು ಮಾತುಕತೆ ನಡೆಸಿ ವಿವಾಹಕ್ಕೆ ಅನುಮತಿ ನೀಡಿದರು. ಬಳಿಕ ವಿವಾಹ ನೆರವೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...