ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ಎಂದ ಆಪ್

Date:

Advertisements

ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡಿದೆ. ಈ ನಡುವೆ ಆಪ್‌ ನಾಯಕರು ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2013ರಲ್ಲಿ 40 ದಿನಗಳ ಕೇಜ್ರಿವಾಲ್ ಸರಕಾರಕ್ಕೆ ಬೆಂಬಲ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳಲು ಪ್ರಮುಖ ಕಾರಣ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೆನ್ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆ ನಂತರ, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರ ಹಾಕಲು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಆಪ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಇವೆಲ್ಲವೂ ಇಂಡಿಯಾ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಿಕ್ಕಟ್ಟಿನ ಸ್ವರೂಪಕ್ಕೆ ತಿರುಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

Advertisements

ದೆಹಲಿಯಲ್ಲಿ ಮಾಕೆನ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳಿಂದ ನಮ್ಮ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಈ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ.

ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ನಂತರ, ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಹಾದಿಯನ್ನೇ ಆಪ್ ಸಹ ಹಿಡಿದಿದೆ. ಇಂಡಿಯಾ ಮೈತ್ರಿಕೂಟದ ನಾಯಕತ್ವವನ್ನು ಕಾಂಗ್ರೆಸ್‌ನಿಂದ ಹಿಂಪಡೆದು, ಮಮತಾ ಬ್ಯಾನರ್ಜಿ ಅವರಿಗೆ ನೀಡಬೇಕು ಎಂಬ ಬೇಡಿಕೆಯನ್ನು ತೃಣಮೂಲ ಕಾಂಗ್ರೆಸ್ ನಾಯಕರು ಇಟ್ಟಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X