ಎಎಪಿ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ

Date:

Advertisements

ಮುಂದಿನ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿಗಳನ್ನು ನೀಡುವುದಾಗಿ ಎಎಪಿ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಸಿಎಂ ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಮತ್ತು ಅರ್ಚಕರಿಗೆ ಗೌರವಧನ ನೀಡುವ ಯೋಜನೆಯನ್ನು ವಿರೋಧಿಸಬೇಡಿ ಎಂದು ಆಪ್ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.

Advertisements

ಅರ್ಚಕರಿಗಾಗಿ ಇಂತಹ ಯೋಜನೆಗಳನ್ನು ಘೋಷಿಸಿದ ದೇಶದ ಮೊದಲ ಪಕ್ಷ ಎಎಪಿ. ದೇಶದ ಯಾವ ಪಕ್ಷವೂ ಇಂತಹ ಯೋಜನೆ ತಂದಿಲ್ಲ. ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಮಂಗಳವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ದೇವಸ್ಥಾನದಲ್ಲಿರುವ ಎಲ್ಲ ಪಂಡಿತರ ನೋಂದಣಿಯನ್ನು ನಾನು ಮಾಡುತ್ತೇನೆ. ನಮ್ಮ ಶಾಸಕರು ಎಲ್ಲ 70 ಕ್ಷೇತ್ರಗಳಲ್ಲಿ ಇದನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ಶತಮಾನಗಳಿಂದ ನಮ್ಮ ಸಂಪ್ರದಾಯಗಳು ಮತ್ತು ಪದ್ಧತಿಗಳನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸಿ ಅರ್ಚಕರು ದೇವರಿಗೆ ಪೂಜೆಯನ್ನು ನಡೆಸುತ್ತಾರೆ. ಆದರೆ ನಾವು ಅವರತ್ತ ಗಮನಹರಿಸಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಮಸೀದಿಗಳಲ್ಲಿನ‌ ಮೌಲ್ವಿಗಳಿಗೂ ಗೌರವಧನವನ್ನು 18 ಸಾವಿರ ರೂ.ಗಳಿಗೆ ಏರಿಸಲಾಗುತ್ತಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಮಹಿಳೆಯರು, ದಲಿತರು ಮತ್ತು ಹಿರಿಯ ನಾಗರಿಕರು ಸೇರಿದಂತೆ ನಿರ್ದಿಷ್ಟ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಪಕ್ಷ ಇದುವರೆಗೆ ನಾಲ್ಕು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.

ನಗರದಲ್ಲಿ ದಿನವಿಡಿ ನೀರು ಪೂರೈಕೆ ಮಾಡುವ ಭರವಸೆಯನ್ನೂ ನೀಡಿದೆ. ಅವರು ಸುಮಾರು ಶೇ. 20 ಮತದಾರರನ್ನು ಹೊಂದಿರುವ ಪಂಡಿತರು ಮತ್ತು ಸಿಖ್ ಮತದಾರರನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಯೋಜನೆಯು ಚರ್ಚ್‌ಗಳಲ್ಲಿನ ಪಾದ್ರಿಗಳನ್ನು ಒಳಗೊಳ್ಳುತ್ತದೆಯೇ ಎಂಬುದನ್ನು ಕೇಜ್ರಿವಾಲ್ ಉಲ್ಲೇಖಿಸಲಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X