ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

Date:

Advertisements

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿಗೆ ಆಗಮಿಸಿ, ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬೆಳವಣಿಗೆಗೆ ಸಂಬಂಧಿಸಿ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisements

ಈ ಬೆಳವಣಿಗೆಯ ಬಗ್ಗೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ, “ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ನುಗ್ಗಿದ್ದಾರೆ. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

sampigehalli Police nadeem khan

“ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿದ್ದು, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸಿ ಎಂದು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ

ಈ ಬೆಳವಣಿಗೆಯ ಬಗ್ಗೆ ಈ ದಿನ ಡಾಟ್ ಕಾಮ್‌ ಜೊತೆಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದರು.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಅವರು ಈ ದಿನ ಡಾಟ್ ಕಾಮ್‌ ಜೊತೆ ಮಾತನಾಡುತ್ತಾ ಹೇಳಿದರು.

“ನಮ್ಮದು ಒಕ್ಕೂಟ ದೇಶ. ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ಶ್ರೀನಿವಾಸ್ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X