ನಿಗದಿತ ಕಕ್ಷೆ ತಲುಪಿದ ಆದಿತ್ಯ ಎಲ್1 ಉಪಗ್ರಹ: 110 ದಿನಗಳ ನಂತರ ಗಮ್ಯಸ್ಥಾನ ಪ್ರವೇಶ

Date:

Advertisements

ಸುಮಾರು 110 ದಿನಗಳಲ್ಲಿ 15 ಲಕ್ಷ ಕಿ.ಮೀ ಪ್ರಯಾಣದ ನಂತರ ಆದಿತ್ಯ ಎಲ್‌1 ಉಪಗ್ರಹ ಯಶಸ್ವಿಯಾಗಿ ಬಾಹ್ಯಾಕಾಶದ ನಿಗದಿತ ಕಕ್ಷೆಯನ್ನು ತಲುಪಿದೆ.

ತನ್ನ ಗಮ್ಯಸ್ಥಾನ ತಲುಪಿರುವ ಆದಿತ್ಯ ಎಲ್‌1 ಉಪಗ್ರಹ ಮುಂದಿನ ಐದು ವರ್ಷಗಳಲ್ಲಿ ಸೂರ್ಯನ ಬಗ್ಗೆ ಅನ್ವೇಷಣೆ ಕೈಗೊಂಡು ಇಸ್ರೋಗೆ ಮಾಹಿತಿ ರವಾನಿಸಲಿದೆ.

ಭಾರತವು ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ, ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಸ್ರೋ ಸಾಧನೆಗೆ ಶುಭಾಶಯ ಕೋರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೆ.2 ರಂದು ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್ 1 ಉಪಗ್ರಹವನ್ನು ಉಡಾವಣೆ ಮಾಡಿತ್ತು. ಆದಿತ್ಯ ಎಲ್‌1 ತನ್ನ ನಿಗದಿತ ಸ್ಥಳದಿಂದ ಗ್ರಹಣ ಮತ್ತಿತ್ತರ ಯಾವುದೇ ಸೌರಚಟುವಟಿಕೆಗಳನ್ನು ಅಧ್ಯಯನ ಮಾಡಲು ಸಾಧ್ಯವಾಗುತ್ತದೆ.

ಆದಿತ್ಯ ಎಲ್ 1 ತಲುಪಿರುವ ವ್ಯಾಪ್ತಿಯು ಭೂಮಿ ಹಾಗೂ ಸೂರ್ಯನ ನಡುವೆ ಇರುವ ಅಂತರದ ಶೇ.1 ರಷ್ಟು ಮಾತ್ರ ಎಂದು ಇಸ್ರೋ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X