ಮೋದಿ ವಿರುದ್ಧದ ಹೇಳಿಕೆ: 11 ವರ್ಷದ ಬಳಿಕ ಶಾಸಕನಿಗೆ 100 ರೂಪಾಯಿ ದಂಡ

Date:

Advertisements

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ವಿರುದ್ಧ 2014ರ ಚುನಾವಣೆ ಸಂದರ್ಭದಲ್ಲಿ ಮಾನಹಾನಿಕರ ಹೇಳಿಕೆ ನೀಡಿದ ಆರೋಪ ಎದುರಿಸತ್ತಿದ್ದ ಉತ್ತರ ಪ್ರದೇಶದ ಸಮಾಜವಾದಿ ಶಾಸಕ ನಹೀದ್ ಹಸನ್ ಅವರಿಗೆ ಕೈರಾನಾ ನ್ಯಾಯಾಲಯ, 11 ವರ್ಷಗಳಲ್ಲಿ 129 ವಿಚಾರಣೆಗಳನ್ನು ನಡೆಸಿದ ಬಳಿಕ 100 ರೂಪಾಯಿ ದಂಡ ವಿಧಿಸಿದೆ.

ದಂಡ ಪಾವತಿಸಲು ವಿಫಲರಾದಲ್ಲಿ ಒಂದು ತಿಂಗಳು ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಎನ್‌ಡಿಎದ ಪ್ರಧಾನಿ ಅಭ್ಯರ್ಥಿ ಹಾಗೂ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದಲ್ಲಿ ಹಸನ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹದ್ದು ಮೀರಿದ ವರ್ತನೆ- ಗೆರೆ ಎಳೆಯುವುದೇ ಕಾಯ್ದಿರಿಸಿರುವ ಸುಪ್ರೀಮ್ ತೀರ್ಪು?

2014ರ ಮಾರ್ಚ್ 28ರಂದು ಶಾಮ್ಲಿಯ ಆಜಾದ್ ಚೌಕದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧವೂ ಹೇಳಿಕೆ ನೀಡಿದ ಆರೋಪವನ್ನು ಹಸನ್ ಎದುರಿಸುತ್ತಿದ್ದರು.

ಕೈರಾನಾದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದ ಹಸನ್, ಇಬ್ಬರೂ ಅವಿವಾಹಿತರಾಗಿರುವ ಬಗ್ಗೆ ಮತ್ತು ಆನೆ ಬಿಎಸ್‌ಪಿಯ ಚಿಹ್ನೆಯಾಗಿರುವ ಬಗ್ಗೆ ಅಣಕವಾಡಿದ್ದರು. ಮರುದಿನ ಶಾಮ್ಲಿ ಕೋತ್ವಾಲಿ ಠಾಣೆಯಲ್ಲಿ ಅವರ ವಿರುದ್ಧ ಭಾರತೀಯ ದಂಡಸಂಹಿತೆ ಸೆಕಷನ್ 171(ಜಿ) (ಚುನಾವಣೆಯ ಸಂಬಂಧ ಸುಳ್ಳು ಹೇಳಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಪೊಲೀಸರು ಆ ಬಳಿಕ ಆರೋಪಪಟ್ಟಿ ಸಲ್ಲಿಸಿದ್ದು, ಸುಧೀರ್ಘ ಕಾನೂನು ಹೋರಾಟ ನಡೆದಿತ್ತು. ಕೈರಾನದಿಂದ ಮೂರನೇ ಬಾರಿ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಸನ್ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹುಕುಂ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X