2014ರಿಂದ ರಿಲಯನ್ಸ್ ಜಿಯೋಗೆ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಕ್ಕೆ 1,758 ಕೋಟಿ ರೂ. ನಷ್ಟ

Date:

Advertisements

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) 2014ರ ಮೇ ತಿಂಗಳಿನಿಂದ 2024ರ ಮಾರ್ಚ್‌ ತಿಂಗಳವರೆಗೆ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ಗೆ (ಆರ್‌ಜೆಐಎಲ್) ಬಿಲ್ ನೀಡದ ಕಾರಣದಿಂದಾಗಿ ಸರ್ಕಾರಕ್ಕೆ ಬರೋಬ್ಬರಿ 1,757.76 ಕೋಟಿ ರೂಪಾಯಿ ನಷ್ಟವಾಗಿದೆ.

ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯ ಬಳಕೆ ವಿಚಾರದಲ್ಲಿ ರಿಲಯನ್ಸ್ ಜಿಯೋ ನಡುವೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಬಿಎಸ್‌ಎನ್‌ಎಲ್‌ ಶುಲ್ಕವನ್ನು ವಿಧಿಸದ ಕಾರಣದಿಂದಾಗಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕ ಮತ್ತು ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

Advertisements

ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯವನ್ನು ಹಂಚಿಕೊಳ್ಳಲು ರಿಲಯನ್ಸ್ ಜಿಯೋ ಜೊತೆ ಮಾಸ್ಟರ್ ಸರ್ವಿಸ್ ಒಪ್ಪಂದ (ಎಂಎಸ್‌ಎ) ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದವು ಬಿಎಸ್‌ಎನ್‌ಎಲ್‌ನ ಮೂಲ ಸೌಕರ್ಯವನ್ನು ಜಿಯೋಗೆ 15 ವರ್ಷಗಳ ಕಾಲ ಬಳಸಲು ಅವಕಾಶ ನೀಡುತ್ತದೆ.

ಈ ಒಪ್ಪಂದ ನಡೆದ ಸಂದರ್ಭದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಒಪ್ಪಂದದಿಂದಾಗಿ ಸರ್ಕಾರಕ್ಕೆ ನಷ್ಟವಾಗಲಿದೆ, ಖಾಸಗಿ ಟೆಲಿಕಾಂ ಸಂಸ್ಥೆಗಳು ವಿಸ್ತಾರವಾಗಿ ಬೆಳೆಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹಲವು ಪ್ರಗತಿಪರ ಸಂಘಟನೆಗಳು, ಎಡ ಪಕ್ಷಗಳು ಪ್ರತಿಭಟನೆ, ಧರಣಿ ನಡೆಸಿತ್ತು. ಈ ವಿರೋಧಗಳ ಮಧ್ಯೆಯೂ ಒಪ್ಪಂದ ನಡೆದಿತ್ತು.

ಪ್ರಧಾನಿ ನರೇಂದ್ರ ಮೋದಿ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಉತ್ತೇಜನ ನೀಡಿ ಬಿಎಸ್‌ಎನ್‌ಎಲ್ ಅನ್ನು ಮುಚ್ಚುವ ಷಡ್ಯಂತ್ರ ಮಾಡುತ್ತಿದ್ದಾರೆ. ಅದರಲ್ಲೂ ತನ್ನ ಸ್ನೇಹಿತ ಗೌತಮ್ ಅದಾನಿ ಕುಟುಂಬಕ್ಕೆ ಸೇರಿದ ಸಂಸ್ಥೆಯನ್ನು ಬೆಳೆಸುವುದು ಮೋದಿ ತಂತ್ರ ಎಂದು ವಿಪಕ್ಷಗಳು ಆರೋಪಿಸಿತ್ತು. ವಿಪಕ್ಷಗಳು ಬಿಎಸ್‌ಎನ್‌ಎಲ್ ಪತನದ ಎಚ್ಚರಿಕೆಯನ್ನೂ ನೀಡಿತ್ತು. ಅದರಂತೆ ಈ ಹತ್ತು ವರ್ಷದ ಅವಧಿಯಲ್ಲಿ ಬಿಎಸ್‌ಎನ್‌ಎಲ್‌ ಬಳಕೆದಾರರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಉಳಿದ ಖಾಸಗಿ ಟೆಲಿಕಾಂ ಸಂಸ್ಥೆಗಳನ್ನೆಲ್ಲಾ ಹಿಂದೆ ತಳ್ಳಿ ಜಿಯೋ ವಿಸ್ತಾರವಾಗಿ ಬೆಳೆದುಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X