ದೆಹಲಿ | ಧೂಳಿನ ಬಿರುಗಾಳಿ; 205 ವಿಮಾನಗಳು ವಿಳಂಬ, ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

Date:

ಶುಕ್ರವಾರ ದೆಹಲಿಯಲ್ಲಿ ತೀವ್ರವಾದ ಧೂಳಿನ ಬಿರುಗಾಳಿ ಉಂಟಾದ ಕಾರಣದಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಕನಿಷ್ಠ 205 ವಿಮಾನಗಳು ವಿಳಂಬವಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿತ್ತು. ಕನಿಷ್ಠ 50 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸರಾಸರಿ ಒಂದು ಗಂಟೆಗಳ ಕಾಲ ನಿರ್ಗಮನ ವಿಳಂಬವಾಗಿದೆ ಎನ್ನಲಾಗಿದೆ.

- Advertisement -

“ಧೂಳಿನ ಬಿರುಗಾಳಿಯ ನಂತರ, ಅನೇಕ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ರದ್ದುಗೊಳಿಸಲಾಗಿದೆ. ಇದರಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮ ವಿಮಾನಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಯಿತು. ಬೇರೆಡೆಗೆ ಮಾರ್ಗ ಬದಲಾಯಿಸಿಕೊಂಡ ವಿಮಾನಗಳು ದೆಹಲಿಗೆ ತಲುಪುವುದು ತಡವಾಗಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗಿದೆ” ಎಂದು ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ಇದನ್ನು ಓದಿದ್ದೀರಾ? ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ಆದರೆ ನಿರಾಶೆಗೊಂಡ ಪ್ರಯಾಣಿಕರು ತಮ್ಮ ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ. “ಶ್ರೀನಗರದಿಂದ ದೆಹಲಿಗೆ ಮುಂಬೈಗೆ ಸಂಜೆ 4 ಗಂಟೆಗೆ ವಿಮಾನವಿತ್ತು. ನಮ್ಮ ವಿಮಾನವು ಸಂಜೆ 6 ಗಂಟೆಯ ಸುಮಾರಿಗೆ ದೆಹಲಿಯಲ್ಲಿ ಇಳಿಯಬೇಕಿತ್ತು. ಆದರೆ ಧೂಳಿನ ಬಿರುಗಾಳಿಯಿಂದಾಗಿ ಚಂಡೀಗಢಕ್ಕೆ ಮಾರ್ಗ ಬದಲಾಯಿಸಲಾಗಿದೆ. ಅದಾದ ನಂತರ ರಾತ್ರಿ 11 ಗಂಟೆಗೆ ದೆಹಲಿಗೆ ತಲುಪಿದೆ” ಎಂದು ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

“ನಂತರ ನಮ್ಮನ್ನು ದೆಹಲಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಂಬೈಗೆ ತೆರಳುವ ಮತ್ತೊಂದು ವಿಮಾನ ಹತ್ತುವಂತೆ ತಿಳಿಸಲಾಗಿದೆ. ನಾವು ಸುಮಾರು 4 ಗಂಟೆಗಳ ಕಾಲ ವಿಮಾನದಲ್ಲಿ ಕುಳಿತುಕೊಂಡೆವು. ನಂತರ ಮತ್ತೆ ಇಳಿಯಲು ತಿಳಿಸಲಾಯಿತು. ಮತ್ತೆ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಈಗ ಬೆಳಿಗ್ಗೆ 8 ಗಂಟೆ ನಾವು ಇನ್ನೂ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ನಮ್ಮ ವಿಮಾನ ಇನ್ನೂ ಟೇಕ್ ಆಫ್ ಆಗಿಲ್ಲ” ಎಂದು ಸಿಲುಕಿಕೊಂಡ ಪ್ರಯಾಣಿಕರು ಹೇಳಿದ್ದಾರೆ.

ಇನ್ನು ಕೆಲವರು ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿರ್ವಹಣೆ, ಮಾಹಿತಿ ನೀಡುವ ವಿಚಾರದಲ್ಲಿ ವಿಶ್ವ ದರ್ಜೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾದ ನವದೆಹಲಿ ಬಸ್ ನಿಲ್ದಾಣಕ್ಕಿಂತ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

“ಕೋಲ್ಕತ್ತಾದಿಂದ ದೆಹಲಿಗೆ ಇಂಡಿಗೋ ವಿಮಾನವನ್ನು ಸಂಜೆಯಿಂದ 6 ಬಾರಿ ಮರು ನಿಗದಿಪಡಿಸಲಾಗಿದೆ. ಇಂಡಿಯಾಗೋ ಪ್ರಯಾಣಿಕರನ್ನು ಹಗುರವಾಗಿ ಪರಿಗಣಿಸುತ್ತಿದ್ದೀರಾ? ನಿಮ್ಮಿಂದಾಗಿ ಈಗಾಗಲೇ ಆರು ಗಂಟೆ ನಷ್ಟವಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...