ಇವಿಎಂ ಅಕ್ರಮ ಆರೋಪ: ‘ಸಾವು ಬದುಕಿನ ಹೋರಾಟ’ – ಸ್ಟ್ರಾಂಗ್‌ ರೂಮ್‌ ಬಳಿ ಮಮತಾ ಬ್ಯಾನರ್ಜಿ

Date:

ಚುನಾವಣಾ ಫಲಿತಾಂಶ ಹೊರಬರಲು ಇನ್ನು ಕೆಲವೇ ದಿನಗಳಿರುವಾಗ ಪಶ್ಚಿಮ ಬಂಗಾಳದಲ್ಲಿ ಇವಿಎಂ ಅಕ್ರಮದ ಆರೋಪಗಳು ಕೇಳಿಬಂದಿದೆ. ಸ್ಟ್ರಾಂಗ್ ರೂಮ್‌ನ ಸೀಲ್ ತೆಗೆದು ಬ್ಯಾಲೆಟ್ ಯುನಿಟ್‌ ತೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಕ್ಷೇತ್ರದ ಸಖಾವತ್ ಸ್ಮಾರಕ ಶಾಲೆಯ ಸ್ಟ್ರಾಂಗ್ ರೂಮ್‌ಗೆ ಭೇಟಿ ನೀಡಿದ್ದಾರೆ. ಮೂರು ಗಂಟೆಗಳಿಗೂ ಹೆಚ್ಚು ಕಾಲ ಅಲ್ಲೇ ಇದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ.

- Advertisement -

ಸ್ಟ್ರಾಂಗ್ ರೂಮ್‌ನಿಂದ ನಿರ್ಗಮಿಸಿದ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “ಇವಿಎಂಗಳನ್ನು ಇಡಲು ಸ್ಟ್ರಾಂಗ್ ರೂಮ್ ಇದೆ. ನಾನು ಅದನ್ನು ಟಿವಿಯಲ್ಲಿ ನೋಡಿದಾಗ, ನಾನು ಬರಬೇಕೆಂದು ಭಾವಿಸಿದೆ. ಕೇಂದ್ರ ಭದ್ರತಾ ಸಿಬ್ಬಂದಿ ಆರಂಭದಲ್ಲಿ ನನಗೆ ಪ್ರವೇಶಿಸಲು ಅವಕಾಶ ನೀಡಿಲ್ಲ. ಆದರೆ ಅಭ್ಯರ್ಥಿಯಾಗಿ ನನಗೆ ಪ್ರವೇಶದ ಹಕ್ಕಿದೆ ಎಂದು ಪ್ರತಿಪಾದಿಸಿದ ಬಳಿಕ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಬಂಗಾಳದಲ್ಲಿ ಚುನಾವಣಾ ಹೈಡ್ರಾಮಾ: ಸ್ಟ್ರಾಂಗ್ ರೂಮ್‌ನಲ್ಲಿ ನಡುರಾತ್ರಿ ನಡೆದಿದ್ದೇನು?

“ಚುನಾವಣಾ ನಿಯಮಗಳ ಪ್ರಕಾರ, ಅಭ್ಯರ್ಥಿಗಳನ್ನು ಸೀಲ್ ಮಾಡಿದ ಕೋಣೆಯ ಹೊರ ಪರಿಧಿಯವರೆಗೆ ಹೋಗಲು ಅವಕಾಶ ನೀಡಲಾಗುತ್ತದೆ. ಅದರ ಪ್ರಕಾರ ನನಗೆ ಅಲ್ಲಿಯವರೆಗೆ ಹೋಗಲು ಅವಕಾಶ ನೀಡಲಾಯಿತು” ಎಂದು ತಿಳಿಸಿದ್ದಾರೆ.

“ನಾನು ನನ್ನ ಜೀವಮಾನವಿಡೀ ಹೋರಾಡುತ್ತೇನೆ. ಇದು ಸಾವು ಬದುಕಿನ ಹೋರಾಟ. ಯಾವುದೇ ಅಕ್ರಮ ನಡೆದರೆ, ನಾವು ಹೋರಾಡುತ್ತೇವೆ. ಇವಿಎಂಗಳನ್ನು ತಿರುಚುವ ಯತ್ನ ಮಾಡಿದರೆ ತೀವ್ರ ಹೋರಾಟ ನಡೆಸಲಾಗುವುದು” ಮಮತಾ ಬ್ಯಾನರ್ಜಿ ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...