ಗುಜರಾತ್ | ನಕಲಿ ಟೋಲ್ ಪ್ಲಾಜಾ, ಸರ್ಕಾರಿ ಕಚೇರಿ ನಂತರ ಈಗ ನಕಲಿ ಆಸ್ಪತ್ರೆ ಪತ್ತೆ

Date:

Advertisements

ಕೆಲವು ತಿಂಗಳ ಹಿಂದಷ್ಟೆ ಗುಜರಾತ್‌ನಲ್ಲಿ ನಕಲಿ ಟೋಲ್‌ ಪ್ಲಾಜಾ ಹಾಗೂ ನಕಲಿ ಸರ್ಕಾರಿ ಕಚೇರಿಗಳು ಪತ್ತೆಯಾಗಿದ್ದವು. ಇದೀಗ ಅಹಮದಾಬಾದ್‌ನಲ್ಲಿ ನಕಲಿ ಆಸ್ಪತ್ರೆ ಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒರ್ವ ರೋಗಿ ಮೃತಪಟ್ಟ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ತಂಡ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ‘ಅನನ್ಯ ಮಲ್ಟಿ ಸ್ಪೆಷಾಲಿಟಿ’ ಎಂಬ ಹೆಸರಿನ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಪ್ರಕರಣವನ್ನು ಬಯಲಿಗೆಳದಿದ್ದಾರೆ.

ಅಧಿಕಾರಿಗಳ ಪ್ರಕಾರ ಸಂಪೂರ್ಣ ಆಸ್ಪತ್ರೆ ನಕಲಿ ವೈದ್ಯರಿಂದ ನಡೆಯುತ್ತಿತ್ತು. ಆಸ್ಪತ್ರೆಯು ಬೇರೆ ವ್ಯದ್ಯರ ಹೆಸರಿನಲ್ಲಿ ನೋಂದಣಿಯಾಗಿತ್ತು. ಸದ್ಯ ಆಸ್ಪತ್ರೆಯನ್ನು ಮುಚ್ಚಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Advertisements

ಆಸ್ಪತ್ರೆಯಲ್ಲಿ ಇಎನ್‌ಟಿ, ಮೂತ್ರ ವಿಭಾಗ, ಚರ್ಮ ವಿಭಾಗ ಸೇರಿದಂತೆ ಹಲವು ವಿಭಾಗಗಳಿದ್ದು,ದಿನವಿಡಿ ಕಾರ್ಯನಿರ್ವಹಿಸಲಾಗುತ್ತಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಆಸ್ಪತ್ರೆಯಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ನಂತರ ಆಕೆಯ ಕುಟುಂಬದವರು ವಿಡಿಯೋ ಚಿತ್ರೀಕರಿಸಿದ ನಂತರ ಕ್ರಮ ಕೈಗೊಳ್ಳಲಾಗಿತ್ತು.

ಸಾಮಾನ್ಯ ಆನಾರೋಗ್ಯದ ಸಮಸ್ಯೆಯಿಂದಾಗಿ ಕುಟುಂಬವು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿತ್ತು. ದಾಖಲಿಸಿದ ಕೆಲವು ದಿನಗಳಲ್ಲಿ ಬಾಲಕಿಯ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿತು. ಅಲ್ಲಿನ ನಕಲಿ ವೈದ್ಯರು ಇಲ್ಲಿ ಸರಿಪಡಿಸಲು ಸಾಧ್ಯವಿಲ್ಲ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದರು.

ಬಾಲಕಿಗೆ 1.5 ಲಕ್ಷ ರೂ. ಶುಲ್ಕ ವಿಧಿಸಿದ ಆಸ್ಪತ್ರೆ ಸಿಬ್ಬಂದಿ ಪೋಷಕರು ಪರಿಪರಿಯಾಗಿ ಕೇಳಿಕೊಂಡರು ವೈದ್ಯಕೀಯ ವರದಿಯನ್ನು ಮಾತ್ರ ನೀಡಲಿಲ್ಲ.

ಬೇರೆ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಬಾಲಕಿ ಮೃತಪಟ್ಟಿದ್ದಳು. ಬಾಲಕಿ ಸಾವಿನ ನಂತರ ಆಸ್ಪತ್ರೆ ನಡೆಸುತ್ತಿರುವವರ ವಿರುದ್ಧ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಹಮದಾಬಾದ್‌ನ ಎಸ್‌ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X