12 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Date:

Advertisements

ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆತನನ್ನು ಪ್ರಕರಣದಿಂದ ಖುಲಾಲೆಗೊಳಿಸಿ ತೀರ್ಪು ನೀಡಿದೆ. ಮೃತ ಮಹಿಳೆಯು ಸಾವನ್ನಪ್ಪಿದ ಸಮಯದಲ್ಲಿ ನೀಡಿದ್ದ ಹೇಳಿಕೆಗಳು ಅಸಂತವಾಗಿವೆ ಎಂಬ ಅಭಿಪ್ರಾಯದ ಮೇಲೆ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ.

ತಮಿಳುನಾಡಿನಲ್ಲಿ, ಸುಮಾರು 13 ವರ್ಷಗಳ ಹಿಂದೆ ಮಹಿಳೆಯೊಬ್ಬರು ಬೆಂಕಿ ಹೊತ್ತಿಕೊಂಡು ಸಾವನ್ನಪ್ಪಿದ್ದರು. ಗಂಭೀರ ಸುಟ್ಟ ಗಾಯಗಳಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಕೆ ಸಾವನ್ನಪ್ಪುವುದಕ್ಕೂ ಮುನ್ನ, ಹೇಳಿಕೆಗಳನ್ನು ನೀಡಿದ್ದರು. ಆದರೆ, ಆಕೆ ಎರಡು ರೀತಿಯ ಹೇಳಿಕೆ ನೀಡಿದ್ದರಿಂದ, ಮಹಿಳೆಯ ಹೇಳಿಕೆಯಲ್ಲಿ ವಿರೋಧಾಭಾಸಗಳಿದ್ದವು.

ಮೃತ ಮಹಿಳೆ ತನ್ನ ಮೊದಲ ಹೇಳಿಕೆಯಲ್ಲಿ ತನ್ನ ಗಂಡನ ವಿರುದ್ಧ ಯಾವುದೇ ಆರೋಪ ಮಾಡಿರಲಿಲ್ಲ. ಬದಲಾಗಿ, ಅಡುಗೆ ಮಾಡುವಾಗ ತನಗೆ ಅರಿವಿಲ್ಲದೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಿದ್ದರು. ಆದರೆ, ಎರಡನೇ ಹೇಳಿಕೆಯಲ್ಲಿ ತನ್ನ ಪತಿಯೇ ತಮಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿದ್ದರು. ಇನ್ನು, ಆಕೆಗೆ ಚಿಕಿತ್ಸೆ ನೀಡಿದ್ದ ಮತ್ತು ಪರೀಕ್ಷಿಸಿದ್ದ ವೈದ್ಯರು, ‘ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಾಗ ಆಕೆಯ ದೇಹದಿಂದ ಸೀಮೆಎಣ್ಣೆ ವಾಸನೆ ಬರುತ್ತಿರಲಿಲ್ಲ’ ಎಂದು ಹೇಳಿದ್ದರು. ವೈದ್ಯರ ವರದಿಯು ಮಹಿಳೆಯ 2ನೇ ಹೇಳಿಕೆಗೆ ಪೂರಕವಾಗಿ ಇರಲಿಲ್ಲ.

Advertisements

ಆ ಕಾರಣಕ್ಕಾಗಿ, ಮಹಿಳೆಯ ಹೇಳಿಕೆಗಳು ಅಸಂತವಾಗಿವೆ ಮತ್ತು ಆಕೆಯ ಪತಿಯೇ ಅಪರಾಧ ಎಸಗಿದ್ದಾನೆ ಎಂಬುದನ್ನು ಸಾಬೀತುಪಡಿಸಲು ಬೇರೆ ಯಾವುದೇ ಪುರಾವೆಗಳಿಲ್ಲ ಎಂಬುದನ್ನು ಗಮನಿಸಿದರುವ ಸುಪ್ರೀಂ ಕೋರ್ಟ್‌, ಆರೋಪಿ ಪತಿಯನ್ನು ಆರೋಪಮುಕ್ತ ಎಂದು ಘೋಷಿಸಿದೆ.

ಈ ವರದಿ ಓದಿದ್ದೀರಾ?: ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕು; ಲಿಂಗತ್ವ ಅಲ್ಪಸಂಖ್ಯಾತ ಮಗುವಿಗೆ ಇಲ್ಲವೇ?

“ಮೃತ ಮಹಿಳೆಯು ಮರಣಕ್ಕೂ ಮುನ್ನ ನೀಡಿದ ಹೇಳಿಕೆಗಳಲ್ಲಿ ಪ್ರಮುಖ ವಿರೋಧಾಭಾಸಗಳಿದ್ದರೆ ಮತ್ತು ಆರೋಪಿ ವಿರುದ್ಧ ಯಾವುದೇ ಗಣನೀಯ ಪುರಾವೆಗಳು ಇಲ್ಲದಿದ್ದರೆ ಶಿಕ್ಷೆ ವಿಧಿಸಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಹೇಳಿದೆ.

“ಮರಣಕ್ಕೂ ಮುನ್ನ ನೀಡುವ ಹೇಳಿಕೆಗಳು ಅನುಮಾನದಿಂದ ಕೂಡಿದ್ದರೆ ಅಥವಾ ಅಸಮಂಜಸವಾಗಿದ್ದರೆ ಯಾವ ಹೇಳಿಕೆಯನ್ನು ನಂಬಬೇಕು ಎಂಬುದನ್ನು ಗುರುತಿಸಲು ನ್ಯಾಯಾಲಯಗಳು ದೃಢೀಕರಣ ಪುರಾವೆಗಳನ್ನು ಹುಡುಕಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳು ಎಚ್ಚರಿಕೆಯಿಂದ ವರ್ತಿಸಬೇಕಾಗುತ್ತದೆ. ಈ ಪ್ರಕರಣವೂ ಅಂತಹದ್ದೇ ಪ್ರಕರಣವಾಗಿದೆ. ಪ್ರಕರಣದಲ್ಲಿ, ಮೃತ ಮಹಿಳೆ ಎರಡು ಹೇಳಿಕೆಗಳನ್ನು ನೀಡಿದ್ದಾರೆ. ಎರಡೂ ವಿಭಿನ್ನವಾಗಿವೆ. ವಿಭಿನ್ನ ಹೇಳಿಕೆಗಳ ಆಧಾರದ ಮೇಲೆ ಮೇಲ್ಮನವಿದಾರನನ್ನು ತಪ್ಪಿತಸ್ಥನೆಂದು ಘೋಷಿಸಲಾಗದು” ಎಂದು ಪೀಠ ಹೇಳಿದೆ. ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದ್ದು, ಆರೋಪಿಯನ್ನು ಖುಲಾಸೆಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X