ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

Date:

Advertisements

ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟು ಮಾಡಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. ಅಂದರೆ ಕೆಲವು ಪ್ರದೇಶಗಳಲ್ಲಿ ಅತಿಯಾದ ಚಳಿ ಇರಲಿದ್ದು, ಇನ್ನು ಕೆಲವೆಡೆ ಮಧ್ಯಮ ಪ್ರಮಾಣದಲ್ಲಿ ಶೀತ ವಾತಾವರಣ ಇರಲಿದೆ ಎಂದು ಇಲಾಖೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ತಾಪಮಾನ ತೀವ್ರವಾಗಿ ಕುಸಿತವಾಗಲಿದ್ದು, 3 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಇದರ ಜೊತೆಗೆ ಮಳೆ ಸುರಿಯುವ ಸಂಭವವೂ ಹೆಚ್ಚಾಗಿದೆ. ಈ ರೀತಿಯ ಹವಾಮಾನ ಚಳಿಗಾಲದ ಕೃಷಿ ಇರುವ ಪ್ರದೇಶಗಳಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ಹವಾಮಾನದಲ್ಲಿ ಉಂಟಾಗಬಹುದಾದ ವೈಪರೀತ್ಯದ ಕಾರಣದಿಂದ ಚಳಿಗಾಲಕ್ಕೆ ಅಗತ್ಯವಿರುವ ಬೆಚ್ಚಗಿನ ಬಟ್ಟೆ, ಹೀಟರ್‌ಗಳು ಸೇರಿದಂತೆ ಚಳಿಗೆ ಅಗತ್ಯವಿರುವ ವಸ್ತುಗಳನ್ನು ಮುಂಚೆಯೇ ಖರೀದಿಸಿಟ್ಟುಕೊಳ್ಳಿ, ಹವಾಮಾನ ಬದಲಾವಣೆಯ ವರದಿಯನ್ನು ಗಮನಿಸುತ್ತಿರಿ ಎಂದು ಜನರಿಗೆ ಇಲಾಖೆ ಸಲಹೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇವಲ 8 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆಯೇ ಸರ್ಕಾರ!

ಪೆಸಿಫಿಕ್ ಪ್ರದೇಶದ ಮೇಲ್ಮೈನಲ್ಲಿ ಕಡಿಮೆ ತಾಪಮಾನದಿಂದಾಗಿ ಲಾ ನಿನಾ ವಿದ್ಯಮಾನವು ಸಂಭವಿಸುತ್ತದೆ, ಇದು ಮಳೆ ಮತ್ತು ತೀವ್ರ ಚಳಿಗಾಲದಂತಹ ಹವಾಮಾನ ಬದಲಾವಣೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಲಾ ನಿನಾ ಏಪ್ರಿಲ್ ಮತ್ತು ಜೂನ್‌ನಲ್ಲಿ ಆರಂಭವಾಗಿ, ಅಕ್ಟೋಬರ್‌ನಿಂದ ಫೆಬ್ರುವರಿ ತಿಂಗಳಲ್ಲಿ ತೀವ್ರಗೊಳ್ಳುತ್ತದೆ.

ಈ ಬಾರಿ ಲಾ ನಿನಾ ಮಳೆಗಾಲದಲ್ಲಿಯೇ ತನ್ನ ಪ್ರಭಾವವನ್ನು ತೋರಿದೆ. ಅದಕ್ಕೆ ಉದಾಹರಣೆ ಎಂದರೆ ದೇಶದಲ್ಲಿ ಮಳೆಗಾಲ ಇನ್ನೂ ಮುಂದುವರಿದಿರುವುದು. ಲಾ ನಿನಾ ವಿದ್ಯಮಾನವು ಪೂರ್ವದ ಮಾರುತಗಳಿಂದ ತಳ್ಳಲ್ಪಡುತ್ತದೆ, ಇದು ಸಮುದ್ರದ ನೀರನ್ನು ಪಶ್ಚಿಮಕ್ಕೆ ತಳ್ಳುತ್ತದೆ, ಇದರಿಂದ ಸಮುದ್ರದ ಮೇಲ್ಮೈಯನ್ನು ತಂಪಾಗಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X