BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

Date:

Advertisements

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ ಎಂದು ಭಾರತ ತಿಳಿಸಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

Advertisements

ಸಿಂಧೂ ಜಲ ಒಪ್ಪಂದ ಅಮಾನತು, ಪಾಕಿಸ್ತಾನ ಪ್ರಜೆಗಳ ವೀಸಾ ರದ್ದು ಹೀಗೆ ಕೇಂದ್ರ ಸರ್ಕಾರಗಳ ವಿವಿಧ ಘೋಷಣೆಗಳ ಬೆನ್ನಲ್ಲೇ ಪಾಕಿಸ್ತಾನ, ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ರದ್ದುಗೊಳಿಸಿತು. ಇದೀಗ ಭಾರತ ಇಸ್ಲಾಮಾಬಾದ್ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಿ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ನಿಷೇಧ ವಿಧಿಸಿದೆ.

ಮೇ 2ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಈ ಆದೇಶವನ್ನು ಹೊರಡಿಸಿದೆ. ನಿಷೇಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X