ಆಗ್ರಾ | ಶಸ್ತ್ರಾಸ್ತ್ರ ಹಿಡಿದು ಕರ್ನಿ ಸೇನಾ ರ್‍ಯಾಲಿ; ಮೂಕಪ್ರೇಕ್ಷಕರಾದ ಪೊಲೀಸರು

Date:

Advertisements

ಉತ್ತರ ಪ್ರದೇಶದ ಆಗ್ರಾದಲ್ಲಿ ಸಮಾಜವಾದಿ ಪಕ್ಷದ ಸಂಸದ ಡಾ. ರಾಮ್‌ಜಿ ಲಾಲ್ ಸುಮನ್ ವಿರುದ್ಧ ಕರ್ನಿ ಸೇನಾ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಹಲವರು ಶಸ್ತ್ರಾಸ್ತ್ರ ಹಿಡಿದು ರ್‍ಯಾಲಿ ನಡೆಸಿದ್ದಾರೆ. ಮಾರಕಾಸ್ತ್ರಗಳು ಮತ್ತು ದೊಣ್ಣೆಗಳೊಂದಿಗೆ ರ್‍ಯಾಲಿ ನಡೆಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಮೂಕಪ್ರೇಕ್ಷಕರಂತೆ ನಿಂದಿದ್ದದ್ದು ಕಂಡುಬಂದಿದೆ.

ಆಗ್ರಾದಲ್ಲಿ ನಡೆದ ರ್‍ಯಾಲಿಯಲ್ಲಿ ಕರ್ನಿ ಸೇನಾದ ಸಾವಿರಾರು ಕಾರ್ಯಕರ್ತರು ಶಸ್ತ್ರಾಸ್ತ್ರ ಹಿಡಿದು, ಅವುಗಳನ್ನು ಬೀಸುತ್ತಾ, ಜಳಪಿಸುತ್ತಾ ಮೆರವಣೆಗೆ ನಡೆಸಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ, ಹೆಚ್ಚುವರಿ ಪೊಲೀಸ್ ಆಯುಕ್ತರು, ರಕ್ಷಣಾ ಪಡೆಗಳು ಸೇರಿದಂತೆ ಬೃಹತ್ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಪೊಲೀಸರ ನಡೆಯ ಬಗ್ಗೆ ಆಕ್ರೋಶ, ಆಕ್ಷೇಪಗಳು ವ್ಯಕ್ತವಾಗಿವೆ.

Advertisements

ಮೊಘಲ್ ದೊರೆ ಬಾಬರ್‌ನನ್ನು ರಜಪೂತ ರಾಜ ರಾಣಾ ಸಂಗಾ ಭಾರತಕ್ಕೆ ಆಹ್ವಾನಿಸಿದ್ದರು ಎಂದು ಎಸ್‌ಪಿ ಸಂಸದ ಡಾ. ರಾಮ್‌ಜಿ ಲಾಲ್ ಸುಮನ್ ಹೇಳಿದ್ದರು. ಇದಕ್ಕೆ ಐತಿಹಾಸಿಕ ದಾಖಲೆಗಳಿವೆ ಎಂದಿದ್ದರು. ಅವರ ಹೇಳಿಕೆಯ ವಿರುದ್ಧ ಕರ್ನಿ ಸೇನಾ ಪ್ರತಿಭಟನೆಗೆ ಕರೆಕೊಟ್ಟಿತ್ತು. ಈ ವೇಳೆ, ಕರ್ನಿ ಸೇನಾದ ಕಾರ್ಯಕರ್ತರು ಶಸ್ತ್ರಾಸ್ತ್ರ ಹಿಡಿದು ಮೆರವಣಿಗೆ ನಡೆಸಿದ್ದು, ಕಾನೂನು-ಸುವ್ಯವಸ್ಥೆಗೆ ಅಡ್ಡಿಯುಂಟುಮಾಡಿದ್ದಾರೆ.

ಇನ್ನು, ತಮ್ಮ ಹೇಳಿಕೆಗಾಗಿ ರಾಮ್‌ಜಿ ಲಾಲ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಯಾರ ಭಾವನೆಗಾದರೂ ಧಕ್ಕೆ ಉಂಟಾಗಿದ್ದರೆ, ವಿಷಾಧಿಸುವುದಾಗಿ ಹೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X