1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

Date:

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು 1800 ಕೋಟಿ ರೂ. ಪಾವತಿಸುವ ಡಿಮ್ಯಾಂಡ್ ನೋಟಿಸ್ಅನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ.

ನೂತನ ಡಿಮ್ಯಾಂಡ್ ನೋಟಿಸ್‌ನಲ್ಲಿ 2017-18 ರಿಂದ 2020-21ರವರೆಗಿನ ಮೌಲ್ಯಮಾಪನ ವರ್ಷಗಳಲ್ಲಿ ದಂಡ ಹಾಗೂ ಬಡ್ಡಿ ಒಳಗೊಂಡ ಹಣ ಒಳಗೊಂಡಿದೆ.

ಈ ನಡುವೆ ಆದಾಯ ತೆರಿಗೆ ಇಲಾಖೆಯ ಮರು ಮೌಲ್ಯಮಾಪನ ಅರ್ಜಿಯ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಮಾ.28(ನಿನ್ನೆ) ರಂದು ವಜಾಗೊಂಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಹಾಗೂ ಪುರುಶೈಂದ್ರ ಕುಮಾರ್ ಕೌರವ್ ಅವರಿದ್ದ ಪೀಠ ಐಟಿ ಇಲಾಖೆ ಮತ್ತೊಂದು ಅವಧಿಗೆ ಮೌಲ್ಯಮಾಪನಗೊಳಿರುವ ಆದೇಶದ ವಿರುದ್ಧ ಮಧ್ಯಪ್ರವೇಶಿಸಲು ನಿರಾಕರಿಸಿ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಸಾಮಾನ್ಯವಾಗಿ ಡಿಮ್ಯಾಂಡ್ ನೋಟಿಸ್ಅನ್ನು ಸಾಲ ಮರುಪಾವತಿ ಮಾಡದ ಅರ್ಜಿದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತದೆ. ಪ್ರಕರಣವು 2017ರಿಂದ 2021ರವರೆಗೆ ಒಳಗೊಂಡಿದೆ. 2014-15 ರಿಂದ 2016-17ರವರೆಗಿನ ಮರುಮೌಲ್ಯಮಾಪನಗೊಳಿಸಿರುವುದರ ವಿರುದ್ಧ ಕಾಂಗ್ರೆಸ್‌ನಿಂದ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

ಇನ್ನು ಐಟಿ ಇಲಾಖೆ ನೀಡಿರುವ ನೋಟಿಸ್ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು ಐಟಿ ಕ್ರಮವನ್ನು ಅಪ್ರಜಾಸತ್ತಾತ್ಮಕ ಮತ್ತು ಅಸಮಂಜಸ ಎಂದು ಕರೆದಿದ್ದು, ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಐ-ಟಿ ಪ್ರಕರಣಗಳ 2 ನೇ ಮಹತ್ವದ ಪ್ರಕರಣವಾಗಿದೆ

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...