ರಜೆ ಘೋಷಿಸಿ ನಿರ್ಧಾರ ಬದಲಿಸಿದ ದೆಹಲಿಯ ಏಮ್ಸ್ ಆಸ್ಪತ್ರೆ

Date:

Advertisements

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ.

ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು ನಂತರ ತನ್ನ ನಿರ್ಧಾರ ಬದಲಿಸಿ ಪ್ರಕಟಣೆ ಹೊರಡಿಸಿದೆ. ಅನಾನುಕೂಲತೆ ತಡೆಗಟ್ಟುವ ಸಲುವಾಗಿ ರೋಗಿಗಳ ಆರೈಕೆಯನ್ನು ಸಲುಭಗೊಳಿಸಲು ಜನವರಿ 22ರ ದಿನದಂದು ಪೂರ್ವಾನುಮತಿ ಹೊಂದಿರುವ ರೋಗಿಗಳಿಗಾಗಿ ಆಸ್ಪತ್ರೆಯ ಹೊರ ರೋಗಿಯ ವಿಭಾಗವು ತೆರೆದಿರುತ್ತದೆ. ಇದರ ಜೊತೆ ಎಲ್ಲ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕೂಡ ಕಾರ್ಯಾಚರಣೆ ನಡೆಸುತ್ತವೆ ಎಂದು ತಿಳಿಸಲಾಗಿದೆ.

ಈ ಮೊದಲು ದೆಹಲಿಯ ಏಮ್ಸ್ ಆಸ್ಪತ್ರೆಯು ತನ್ನ ಸುತ್ತೋಲೆಯಲ್ಲಿ ಸರ್ಕಾರ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯ ದಿನದ ಅಂಗವಾಗಿ ಸರ್ಕಾರ ರಜೆ ಘೋಷಿಸಿದ ಹಿನ್ನೆಲೆ ಆಸ್ಪತ್ರೆ ಸೇವೆ ಸ್ಥಗಿತಗೊಳಿಸುವುದಾಗಿ ತಿಳಿಸಿತ್ತು. ಆದಾಗ್ಯೂ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಏಮ್ಸ್‌ನ ಅರ್ಧ ದಿನದ ರಜೆ ನಿರ್ಧಾರವನ್ಬು ಹಲವು ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು, ಈ ನಿರ್ಧಾರದಿಂದಾಗಿ “ಆರೋಗ್ಯ ಸೇವೆಗಳು” ಅಸ್ತವ್ಯಸ್ತಗೊಳ್ಳುತ್ತವೆ ಎಂದು ಹೇಳಿದ್ದರು.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, , “ಏಮ್ಸ್‌ ದಯವಿಟ್ಟು ಜನವರಿ 22 ರಂದು ವೈದ್ಯಕೀಯ ಸೇವೆ ರದ್ದುಗೊಳಿಸಿ ತುರ್ತುಸ್ಥಿತಿಯನ್ನು ತಂದೊಡ್ಡಬೇಡಿ. ನೀವು ಮಧ್ಯಾಹ್ನ 2 ಗಂಟೆಯ ಸೇವೆಯನ್ನು ನಿಗದಿಪಡಿಸಿದರೆ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುತ್ತದೆ. ಭಗವಂತ ಇದನ್ನು ಒಪ್ಪುವುದಿಲ್ಲ” ಎಂದು ಟೀಕಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು ನಿರ್ಧಾರವನ್ನು ಕಟುವಾಗಿ ಟೀಕಿಸಿದರು, “ಜನರು ಪೂರ್ವಾನುಮತಿಗಾಗಿ ಕಾಯುತ್ತಿದ್ದು, ಏಮ್ಸ್ ದ್ವಾರಗಳಲ್ಲಿ ಚಳಿಯಲ್ಲಿ ಹೊರಗೆ ಮಲಗಿದ್ದಾರೆ. ಬಡವರು ಮತ್ತು ಸಾಯುತ್ತಿರುವವರು ಕಾಯಬಹುದು. ಏಕೆಂದರೆ ಕ್ಯಾಮೆರಾಗಳು ಮತ್ತು ಪಿಆರ್‌ಗಳು ಮೋದಿಯವರ ಹತಾಶೆಗೆ ಆದ್ಯತೆ ನೀಡಲಾಗುತ್ತದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಆಸ್ಪತ್ರೆ ಸೇವೆಗಳನ್ನು ಸ್ಥಗಿತಗೊಳಿಸುವುದೇ ! ಏನಿದು ತಮಾಷೆ ?

    ಕರ್ತವ್ಯ ಮುಖ್ಯವೋ ? ದೇವರು ಮುಖ್ಯವೋ ?

    ಮೊದಲು ನಿಮ್ಮ – ನಿಮ್ಮ ಕರ್ತವ್ಯವನ್ನು ಮಾಡಿ.

    ಆಮೇಲೆ ಏನು ಬೇಕಾದರೂ ಮಾಡಿ ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X