ರಷ್ಯಾದಲ್ಲಿ ತುರ್ತು ಭೂಸ್ಪರ್ಶ ನಂತರ ಮತ್ತೆ ಸ್ಯಾನ್‌ ಫ್ರಾನ್ಸಿಸ್ಕೊದತ್ತ ಏರ್‌ ಇಂಡಿಯಾ ವಿಮಾನ

Date:

Advertisements
  • 216 ಪ್ರಯಾಣಿಕರು, 16 ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ
  • ತಾಂತ್ರಿಕ ದೋಷದಿಂದ ರಷ್ಯಾದ ಮಗದನ್‌ನಲ್ಲಿ ಬೋಯಿಂಗ್‌ 777 ತುರ್ತು ಭೂಸ್ಪರ್ಶ

ಏರ್‌ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಈಗ ಎಂಜಿನ್‌ ದೋಷ ಸರಿಪಡಿಸಿಕೊಂಡು ಗುರುವಾರ (ಜೂನ್ 8) ಮತ್ತೆ ಸ್ಯಾನ್‌ ಫ್ರಾನ್ಸಿಸ್ಕೊಗೆ ತನ್ನ ಪಯಣ ಆರಂಭಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊ ನಗರಕ್ಕೆ ತೆರಳುತ್ತಿದ್ದ ವಿಮಾನ ರಷ್ಯಾದ ಮಗದನ್ ಎಂಬಲ್ಲಿ ಎಂಜಿನ್‌ನಲ್ಲಿಯ ತಾಂತ್ರಿಕ ದೋಷದಿಂದ ವಿಮಾನ ಇಳಿದಿತ್ತು. 232 ಪ್ರಯಾಣಿಕರೊಂದಿಗೆ ವಿಮಾನ ಮತ್ತೆ ತನ್ನ ಪಯಣ ಆರಂಭಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಟಿದ್ದ ಎಐ173 ವಿಮಾನವು ಎಂಜಿನ್ ದೋಷದಿಂದಾಗಿ ಮಂಗಳವಾರ ರಷ್ಯಾದ ಮಗದನ್ ಎಂಬಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು ಎಂದು ಏರ್ ಇಂಡಿಯಾ ಒಡೆತನದ ಟಾಟಾ ಗ್ರೂಪ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

Advertisements

ಏರ್‌ ಇಂಡಿಯಾದ ಸಂಸ್ಥೆಯು ಈ ಬಗ್ಗೆ ಟ್ವೀಟ್‌ ಮಾಡಿದೆ.

216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತ ಬೋಯಿಂಗ್ 777-200 ಎಲ್‌ಆರ್ ವಿಮಾನವು ಸುರಕ್ಷಿತವಾಗಿ ಇಳಿದಿತ್ತು. ಇದೀಗ ರಷ್ಯಾದ ಮಗದನ್‌ನಿಂದ ವಿಮಾನ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಡಲಿದೆ ಎಂದು ಗುರುವಾರ ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಎಲ್ಲ ಪ್ರಯಾಣಿಕರು ಸ್ಯಾನ್ ಫ್ರಾನ್ಸಿಸ್ಕೊಗೆ ತಲುಪಿದ ನಂತರ ಎಲ್ಲ ರೀತಿಯ ಔಪಚಾರಿಕತೆಗಳನ್ನು ಕೈಗೊಳ್ಳಲು ಏರ್ ಇಂಡಿಯಾ ಸ್ಯಾನ್ ಫ್ರಾನ್ಸಿಸ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕಾರ್ಯಪಡೆ ಸಜ್ಜುಗೊಳಿಸಿದೆ.

ಸ್ಯಾನ್ ಫ್ರಾನ್ಸಿಸ್ಕೊನಲ್ಲಿನ ತಂಡವು ಪ್ರಯಾಣಿಕರಿಗೆ ವೈದ್ಯಕೀಯ ಸೇವೆ ಮಾತ್ರವಲ್ಲದೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸಿದ್ಧವಾಗಿದೆ ಎಂದು ಏರ್ ಇಂಡಿಯಾದ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವೊಂದು ತನ್ನ ಎಂಜಿನವೊಂದರಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ರಷ್ಯಾದ ಮಗದನ್‌ ಎಂಬಲ್ಲಿ ಮಂಗಳವಾರ (ಜೂನ್ 6) ತುರ್ತು ಭೂಸ್ಪರ್ಶ ಮಾಡಿತ್ತು.

ಬೋಯಿಂಗ್‌ 777 ಹೆಸರಿನ ವಿಮಾನ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ರಷ್ಯಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಬಹಳ ತೊಂದರೆ ಅನುಭವಿಸಿದರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X