8 ಗಂಟೆಗಳ ಕಾಲ ತಡವಾದ ಏರ್ ಇಂಡಿಯಾ ವಿಮಾನ: ಎಸಿ ಇಲ್ಲದೆ ಪ್ರಯಾಣಿಕರು ಮೂರ್ಛೆ

Date:

Advertisements

ದೆಹಲಿಯಿಂದ ಅಮೆರಿಕದ ಸ್ಯಾನ್‌ ಪ್ರಾನ್ಸಿಸ್ಕೊಗೆ ತೆರಳಬೇಕಿದ್ದ ಏರ್‌ ಇಂಡಿಯಾ ವಿಮಾನವೊಂದು 8 ಗಂಟೆಗಳ ಕಾಲ ತಡವಾದ ಕಾರಣ ನಿಲ್ದಾಣದಲ್ಲಿ ಎಸಿ ವ್ಯವಸ್ಥೆಯಿಲ್ಲದೆ ಹಲವು ಪ್ರಯಾಣಿಕರು ಮೂರ್ಛೆ ಹೋದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಹಲವು ಪ್ರಯಾಣಿಕರು ತಮಗಾದ ನೋವುಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಹಲವರು ವಿಮಾನಕ್ಕಾಗಿ ನಿಲ್ದಾಣದಲ್ಲಿ ಕಾಯುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಪತ್ರಕರ್ತರಾದ ಶ್ವೇತಾ ಪುಂಜ್‌, ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನವು 8 ಗಂಟೆಗಳ ಕಾಲ ತಡವಾದ ಕಾರಣ ಸೂಕ್ತವಾದ ಕುರ್ಚಿಯಿಲ್ಲದೆ ಹಲವರು ನೆಲದ ಮೇಲೆ ಕುಳಿತುಕೊಂಡಿದ್ದರು. ಕೆಲವರು ಎಸಿ ವ್ಯವಸ್ಥೆಯಿಲ್ಲದ ಕಾರಣ ಮೂರ್ಛೆ ಕೂಡ ಹೋದರು ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಟ್ಯಾಗ್‌ ಮಾಡಿರುವ ಶ್ವೇತಾ ಅವರು ಇಡೀ ಘಟನೆಯನ್ನು ಅಮಾನವೀಯ ಎಂದು ಕರೆದಿದ್ದಾರೆ.

“ಏರ್ ಇಂಡಿಯಾದ ಖಾಸಗೀಕರಣದ ಕಥೆಯು ವಿಫಲವಾಗಿದೆ. ಡಿಜಿಸಿಎ ಎಐ 183 ವಿಮಾನವು 8 ಗಂಟೆಗಳ ಕಾಲ ತಡವಾಗಿದೆ. ಪ್ರಯಾಣಿಕರು ಎಸಿ ವ್ಯವಸ್ಥೆಯಿಲ್ಲದೆ ಕೆಳಗೆ ಕುಳಿತ್ತಿದ್ದರು. ಎಸಿಯಿಲ್ಲದ ಕಾರಣ ಕೆಲವರು ಅಸ್ವಸ್ಥರಾದರು. ಇದು ಅಮಾನವೀಯ” ಎಂದು ಶ್ವೇತ ಪುಂಜ್‌ ಹೇಳಿದ್ದಾರೆ.

ಶ್ವೇತಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಏರ್‌ ಇಂಡಿಯಾ, ನಾವು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ತಂಡ ತಡವಾಗಿರುವ ಬಗ್ಗೆ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬುವನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ನಿರಂತರ ಬೆಂಬಲ ಹಾಗೂ ತಿಳುವಳಿಕೆಗಾಗಿ ಮೆಚ್ಚಿಗೆ ವ್ಯಕ್ತಪಡಿಸುತ್ತೇವೆ. ಪ್ರಯಾಣಿಕರಿಗೆ ಅಗತ್ಯ ನೆರವು ಒದಗಿಸಲು ನಮ್ಮ ತಂಡಕ್ಕೆ ಜಾಗೃತಗೊಳಿಸಿದ್ದೇವೆ” ಎಂದು ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X