ಅಜಿತ್ ಪವಾರ್ ದುರಂತ: ತನಿಖೆಗೆ ಆಗ್ರಹಿಸಿದ ನಾಯಕರು ಯಾರ್ಯಾರು?

Date:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬಾರಾಮತಿ ವಿಮಾನ ಅಪಘಾತವು ದೇಶಾದ್ಯಂತ ತೀವ್ರ ಆಘಾತ ಮೂಡಿಸಿದೆ. ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕೆಂದು ಪ್ರಬಲವಾಗಿ ಆಗ್ರಹಿಸಿದ್ದಾರೆ.

- Advertisement -

ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸುಪ್ರೀಂ ತನಿಖೆಗೆ ಆಗ್ರಹ
ಅಜಿತ್ ಪವಾರ್ ಸಾವು “ತೀವ್ರ ಆಘಾತಕಾರಿ” ಎಂದು ಹೇಳಿರುವ ಮಮತಾ ಬ್ಯಾನರ್ಜಿ ಅವರು, ಸತ್ಯಾಸತ್ಯತೆ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ. ಇವರಿಗೆ ಧ್ವನಿಗೂಡಿಸಿರುವ ಅಖಿಲೇಶ್ ಯಾದವ್, “ಇದರ ಸತ್ಯ ಹೊರಬರಬೇಕಾದರೆ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯಬೇಕು ” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ರಾಮದಾಸ್ ಅಠಾವಳೆ ತನಿಖೆಗೆ ಒತ್ತಾಯ
ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಅಜಿತ್ ಪವಾರ್ ಅಗಲಿಕೆಯನ್ನು “ದೇಶಕ್ಕೆ ಮತ್ತು ಮಹಾರಾಷ್ಟ್ರಕ್ಕೆ ಆದ ದೊಡ್ಡ ನಷ್ಟ” ಎಂದು ಕರೆದಿದ್ದಾರೆ. ಅಲ್ಲದೆ, ಈ ದುರಂತದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರೂ ಸಹ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ರಾಜ್ಯ ಸರ್ಕಾರದಿಂದ ತನಿಖೆ ಎಂದ ಏಕನಾಥ್ ಶಿಂಧೆ
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ, ವಿಮಾನ ಅಪಘಾತದ ಕಾರಣವನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ತನಿಖೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಳಪೆ ಹವಾಮಾನ ಎಂದ ರಾಮ್ ಮೋಹನ್ ನಾಯ್ಡು
ಅಪಘಾತಕ್ಕೆ ಕಾರಣವೇನಿರಬಹುದು ಎಂಬ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, “ವಿಮಾನ ಪತನವಾದ ಸಮಯದಲ್ಲಿ ಆ ಪ್ರದೇಶದಲ್ಲಿ ‘ಗೋಚರತೆ’ ತೀರಾ ಕಳಪೆಯಾಗಿತ್ತು. ಹವಾಮಾನ ವೈಪರೀತ್ಯವೇ ದುರಂತಕ್ಕೆ ಕಾರಣವಾಗಿರುವ ಸಾಧ್ಯತೆಯಿದೆ,” ಎಂದು ತಿಳಿಸಿದ್ದಾರೆ.

ದುರಂತದಲ್ಲಿ ಯಾವುದೇ ಪಿತೂರಿಯಿಲ್ಲ: ಶರದ್‌ ಪವಾರ್

ಅಜಿತ್ ಪವಾರ್ ಅವರ ಚಿಕ್ಕಪ್ಪ ಹಾಗೂ ಎನ್‌ಸಿಪಿ ನಾಯಕರಾದ ಶರದ್ ಪವಾರ್, “ಇದು ಸಂಪೂರ್ಣವಾಗಿ ಅಪಘಾತ ಮಾತ್ರ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಇದನ್ನು ಭರ್ತಿ ಮಾಡಲು ಸಾಧ್ಯವಿಲ್ಲ. ಇದನ್ನು ರಾಜಕೀಯಗೊಳಿಸಬೇಡಿ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...