ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

Date:

Advertisements

ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌,ದೇಶದಲ್ಲಿನ ಹಲವು ಸಮಸ್ಯೆಗಳು ಇದಕ್ಕಿಂತ ಹೆಚ್ಚು ಮುಖ್ಯವಾಗಿದೆ ಎಂದು ತಿಳಿಸಿದರು.

ಲಖನೌದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಎಎಪಿ ಸಂಸದ ಸಂಜಯ್‌ ಸಿಂಗ್‌, “ಮಣಿಪುರದಲ್ಲಿ ಕಾರ್ಗಿಲ್‌ ಯೋಧರೊಬ್ಬರ ಪತ್ನಿಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಪ್ರತಿಯೊಬ್ಬರಿಗೂ ಅಲ್ಲದೆ ಇಡೀ ದೇಶ ಕೂಡ ಇನ್ನೂ ನೋವಿನಲ್ಲಿದೆ. ನೂರಾರು ಮಹಿಳೆಯರನ್ನು ಅಮಾನುಷವಾಗಿ ನಡೆಸಿಕೊಳ್ಳಲಾಯಿತು. ಆದರೂ ಭಾರತದ ಪ್ರಧಾನಿ ಮೌನವಾಗಿದ್ದಾರೆ. ಪ್ರಜ್ವಲ್‌ ರೇವಣ್ಣ ಆತನ ತಾಯಿ ವಯಸ್ಸಿನ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅತ್ಯಾಚಾರವೆಸಗಿದ್ದಾನೆ. ಆದರೆ ಪ್ರಧಾನ ಮಂತ್ರಿಗಳು ಆತನ ಪರವಾಗಿ ಮತಯಾಚಿಸುತ್ತಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಭದ್ರತೆಗಿದ್ದ ಪೊಲೀಸ್ ಆತ್ಮಹತ್ಯೆ

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಅರವಿಂದ್ ಕೇಜ್ರಿವಾಲ್‌ ಕೂಡ ಯಾವುದೇ ಉತ್ತರ ನೀಡಲಿಲ್ಲ.

ಕೆಲವು ದಿನಗಳ ಹಿಂದಷ್ಟೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಅಧಿಕೃತ ಕಚೇರಿ ಸಿಬ್ಬಂದಿ ಬಿಬವ್‌ ಕುಮಾರ್‌ ಎಂಬುವವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಅವರು ದೂರು ನೀಡಿದ್ದರು. ಎಎಪಿ ಕೂಡ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯೆ ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X