ಆತಂಕಕಾರಿ ಮಟ್ಟದಲ್ಲಿ ಕ್ಯಾನ್ಸರ್ ಏರಿಕೆ: ಒಂದೇ ವರ್ಷದಲ್ಲಿ 15.70 ಲಕ್ಷ ಪ್ರಕರಣ, 8.69 ಲಕ್ಷ ಸಾವು

Date:

ದೇಶದಲ್ಲಿ ಕ್ಯಾನ್ಸರ್ ಮಹಾಮಾರಿ ಆತಂಕಕಾರಿ ಮಟ್ಟದಲ್ಲಿ ಉಲ್ಬಣಿಸುತ್ತಿದೆ. 2025ನೇ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 15.70 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ವರ್ಷದಲ್ಲಿ 8.69 ಲಕ್ಷಕ್ಕೂ ಹೆಚ್ಚು ಮಂದಿ ಈ ರೋಗಕ್ಕೆ ಬಲಿಯಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ನೀಡಿದೆ.

- Advertisement -

ಐಸಿಎಂಆರ್ (ICMR) ದತ್ತಾಂಶವನ್ನು ಆಧರಿಸಿ ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಈ ಅಂಕಿ-ಅಂಶ ಮಂಡಿಸಿದ್ದಾರೆ.ಕಳೆದ ಐದು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದರೆ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವುದು ಸ್ಪಷ್ಟವಾಗಿದೆ. 2021ರಲ್ಲಿ 14.26 ಲಕ್ಷವಿದ್ದ ಹೊಸ ಪ್ರಕರಣಗಳ ಸಂಖ್ಯೆ, ಐದೇ ವರ್ಷಗಳಲ್ಲಿ 1.43 ಲಕ್ಷದಷ್ಟು ಹೆಚ್ಚಳ ಕಂಡು 15.70 ಲಕ್ಷಕ್ಕೆ ಜಿಗಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದೇ ಅವಧಿಯಲ್ಲಿ ಕ್ಯಾನ್ಸರ್ ಸಾವಿನ ಸಂಖ್ಯೆಯು 7.89 ಲಕ್ಷದಿಂದ 8.69 ಲಕ್ಷಕ್ಕೆ ಏರಿಕೆಯಾಗಿದೆ. ಆಧುನಿಕ ಜೀವನಶೈಲಿ, ವಯಸ್ಸಾದವರ ಜನಸಂಖ್ಯೆ ಹೆಚ್ಚಳ ಹಾಗೂ ರೋಗ ಪತ್ತೆಹಚ್ಚುವಿಕೆಯಲ್ಲಿನ ಸುಧಾರಣೆಯೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.ರಾಜ್ಯವಾರು ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ಹಾಗೂ ಸಾವು ಉತ್ತರ ಪ್ರದೇಶದಲ್ಲಿ ದಾಖಲಾಗಿದೆ.

ಉತ್ತರ ಪ್ರದೇಶದಲ್ಲಿ 2.26 ಲಕ್ಷ ಹೊಸ ಪ್ರಕರಣಗಳು ಹಾಗೂ 1.25 ಲಕ್ಷ ಸಾವು ಸಂಭವಿಸಿದೆ. ಇದರ ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ (71,696 ಸಾವು), ಪಶ್ಚಿಮ ಬಂಗಾಳ (67,093), ಬಿಹಾರ (65,571) ಮತ್ತು ತಮಿಳುನಾಡು (54,864) ರಾಜ್ಯಗಳಿವೆ. ಈಶಾನ್ಯ ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಅತಿ ಹೆಚ್ಚು (42,694 ಪ್ರಕರಣ) ರೋಗಿಗಳು ಪತ್ತೆಯಾಗಿದ್ದಾರೆ.ವಿಶ್ವ ಆರೋಗ್ಯ ಸಂಸ್ಥೆಯ (WHO) ‘ಗ್ಲೋಬೊಕ್ಯಾನ್ 2022’ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಭೀತಿ ಮತ್ತಷ್ಟು ಹೆಚ್ಚಲಿದೆ. ಭಾರತದಲ್ಲಿ 75 ವರ್ಷ ವಯಸ್ಸಿಗೂ ಮುನ್ನವೇ ಕ್ಯಾನ್ಸರ್ ಬರುವ ಸಂಚಿತ ಅಪಾಯವು ಶೇ. 10.6ರಷ್ಟಿದೆ. ಅಂದರೆ, ಸರಿಸುಮಾರು ಪ್ರತಿ 10 ಭಾರತೀಯರಲ್ಲಿ ಒಬ್ಬರಿಗೆ 75 ವರ್ಷಕ್ಕೂ ಮೊದಲೇ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಕ್ಯಾನ್ಸರ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ 770 ಜಿಲ್ಲಾ ಮಟ್ಟದ ಮತ್ತು 6,410 ಸಮುದಾಯ ಮಟ್ಟದ ಎನ್‌ಸಿಡಿ (NCD) ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ 524 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ, 30 ವರ್ಷ ಮೇಲ್ಪಟ್ಟವರಿಗೆ ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ನಡೆಸಲಾಗುತ್ತಿದ್ದು, 39 ಉನ್ನತ ಮಟ್ಟದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...