273.5 ಕೋಟಿ ರೂ. ಜಿಎಸ್‌ಟಿ ದಂಡದ ವಿರುದ್ಧ ಪತಂಜಲಿ ಆಯುರ್ವೇದ ಸಲ್ಲಿಸಿದ್ದ ಅರ್ಜಿ ವಜಾ

Date:

Advertisements

ಸುಮಾರು 273.50 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ದಂಡವನ್ನು ಪ್ರಶ್ನಿಸಿ ಪತಂಜಲಿ ಆಯುರ್ವೇದ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಶೇಖರ್ ಬಿ ಸರಾಫ್ ಮತ್ತು ನ್ಯಾಯಮೂರ್ತಿ ವಿಪಿನ್ ಚಂದ್ರ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ರೀತಿಯ ದಂಡಗಳನ್ನು ಕ್ರಿಮಿನಲ್ ವಿಚಾರಣೆಯೆ ನಂತರವೇ ವಿಧಿಸಬಹುದು ಎಂಬ ಪತಂಜಲಿಯ ವಾದವನ್ನು ತಿರಸ್ಕರಿಸಿತು.

ಇದನ್ನು ಓದಿದ್ದೀರಾ? ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

Advertisements

ಹಾಗೆಯೇ ತೆರಿಗೆ ಅಧಿಕಾರಿಗಳು ಕ್ರಿಮಿನಲ್ ನ್ಯಾಯಾಲಯದ ವಿಚಾರಣೆಗಳ ಅಗತ್ಯವಿಲ್ಲದೆ ಸಿವಿಲ್ ವಿಚಾರಣೆಯ ಮೂಲಕ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 122ರ ಅಡಿಯಲ್ಲಿ ದಂಡ ವಿಧಿಸಬಹುದು ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಜಿಎಸ್‌ಟಿ ದಂಡದ ಬಗ್ಗೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತೀರ್ಪು ನೀಡಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. “ವಿವರವಾದ ವಿಶ್ಲೇಷಣೆಯ ನಂತರ, ಸಿಜಿಎಸ್‌ಟಿ ಕಾಯ್ದೆಯ ಸೆಕ್ಷನ್ 122ರ ಅಡಿಯಲ್ಲಿ ನಡೆಯುವ ಪ್ರಕ್ರಿಯೆಯನ್ನು ತೀರ್ಪು ನೀಡುವ ಅಧಿಕಾರಿಯೇ ತೀರ್ಮಾನಿಸಬೇಕು. ವಿಚಾರಣೆಗೆ ಒಳಗಾಗುವ ಅಗತ್ಯವಿಲ್ಲ ಎಂಬುದು ಸ್ಪಷ್ಟ” ಎಂದು ಪೀಠ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X