ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ; ರೈಲಿನಲ್ಲಿ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

Date:

Advertisements

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಮೇಲೆ ರೈಲ್ವೇ ನೌಕರನೊಬ್ಬನನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ನಡೆದಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ರೈಲ್ವೇ ಸಿಬ್ಬಂದಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಾಲಕಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ರೈಲ್ವೇ ಸಿಬ್ಬಂದಿಯನ್ನು ಹಿಡಿದ ಕುಟುಂಬಸ್ಥರು ಮತ್ತು ಇತರ ಪ್ರಯಾಣಿಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಬಿಹಾರದ ಸಿವಾನ್‌ ಮೂಲದ ಕುಟುಂಬವು ರೈಲಿನಲ್ಲಿ ದೆಹಲಿಗೆ ತೆರಳುತ್ತಿತ್ತು. ಈ ವೇಳೆ, ಅದೇ ಕೋಚ್‌ನಲ್ಲಿದ್ದ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಎಂಬಾತ ಬಾಲಕಿಯನ್ನು ತನ್ನ ಸೀಟ್‌ನಲ್ಲಿ ಕೂರಿಸಿಕೊಂಡಿದ್ದ. ಬಾಲಕಿಯ ತಾಯಿ ಶೌಚಾಲಯಕ್ಕೆ ತೆರಳಿದಾಗ, ಆತ ಬಾಲಕಿಯೊಂದಿಗೆ ವರ್ತಿಸಿದ್ದಾನೆ. ಬಾಲಕಿ ತನ್ನ ತಾಯಿ ಮರಳಿ ಬಂದಾಗ ಆತನ ಅಸಭ್ಯ ವರ್ತನೆಯ ಬಗ್ಗೆ ತಿಳಿಸಿದ್ದಾಳೆ ಎಂದು ವರದಿಯಾಗಿದೆ.

Advertisements

ಘಟನೆಯ ಬಗ್ಗೆ ಬಾಲಕಿಯ ತಾಯಿ ತನ್ನ ಪತಿ ಮತ್ತು ಕುಟುಂಬಸ್ಥರಿಗೆ ಹಾಗೂ ಇತರ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬಸ್ಥರು ಪ್ರಶಾಂತ್ ಕುಮಾರ್ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್‌ನನ್ನು ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣದಲ್ಲಿ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಟುಂಬಸ್ಥರು ಆತನ ವಿರುದ್ಧ ದೂರು ನೀಡಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿದ್ದ ಪ್ರಶಾಂತ್‌ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆತ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X