ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

Date:

  • ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ
  • ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ

ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ ‘ಫ್ಯಾಕ್ಟ್‌ಚೆಕ್‌ ಸಂಸ್ಥೆ’ ರಚಿಸಲು ನಿರ್ಧರಿಸಿರುವುದು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ. ಇಂಥ ನಡೆ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಭಾರತದ ಸಂಪಾದಕರ ಒಕ್ಕೂಟ (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಶುಕ್ರವಾರ (ಏಪ್ರಿಲ್‌ 7) ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಗುರುವಾರ (ಏಪ್ರಿಲ್‌ 6) ವಿವಾದಾತ್ಮಕ 2021ರ ಐಟಿ ನಿಯಮಗಳು ಕಾಯಿದೆಗೆ ಹೊಸ ತಿದ್ದುಪಡಿ ತಂದಿದೆ. ಈ ತಿದ್ದುಪಡಿಗೆ ಗಿಲ್ಡ್‌ ಆಕ್ಷೇಪ ವ್ಯಕ್ತಪಡಿಸಿದೆ.

ಸತ್ಯಶೋಧನಾ ಸಂಸ್ಥೆ ತಪ್ಪು ಮಾಹಿತಿಯನ್ನು ಪತ್ತೆಹಚ್ಚಲು ಉದ್ದೇಶಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ದುರುದ್ದೇಶಪೂರಿತವಾಗಿ ಸತ್ಯಶೋಧನೆಯ ಹೆಸರಿನಲ್ಲಿ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಸಾಧ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸರ್ಕಾರದ ಕುರಿತ ಸುದ್ದಿಗಳನ್ನು ಸ್ವತಃ ಸರ್ಕಾರವೇ ಪರಿಶೀಲಿಸಿ ‘ಸತ್ಯ’ ಅಥವಾ ‘ಸುಳ್ಳು’ ಎಂದು ನಿರ್ಧರಿಸಿ ಯಾವುದೇ ಮಾಧ್ಯಮ ಸಂಸ್ಥೆಯಿಂದ ಪ್ರಕಟವಾದ ಸುದ್ದಿ, ಲೇಖನಗಳು ಅಥವಾ ವಿಡಿಯೊಗಳನ್ನು ಪ್ರಕಟಣೆಯಲ್ಲಿ/ ಪ್ರಸಾರದಲ್ಲಿ ಉಳಿಸಿಕೊಳ್ಳದಂತೆ ಆದೇಶಿಸುವ ಹಕ್ಕನ್ನು ಸರ್ಕಾರ ತನಗೆ ದಯಪಾಲಿಸಿಕೊಂಡಿದೆ ಎಂದು ಎಡಿಟರ್ಸ್ ಗಿಲ್ಡ್ ಅಭಿಪ್ರಾಯಪಟ್ಟಿದೆ.

ಈ ಕುರಿತು ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಪತ್ರಬರೆದಿರುವ ಎಡಿಟರ್ಸ್‌ ಗಿಲ್ಡ್‌, ಪತ್ರವನ್ನು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

“2021ರ ಐಟಿ ನಿಯಮಗಳು ಕಾಯಿದೆಗೆ ಸೂಚಿಸಲಾದ ಹೊಸ ತಿದ್ದುಪಡಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಹಾನಿಯುಂಟು ಮಾಡಿದೆ. ತಿದ್ದುಪಡಿಯಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ‘ಸತ್ಯಶೋಧನಾ ಸಂಸ್ಥೆ’ ಸ್ಥಾಪನೆಗೆ ಅಧಿಕಾರ ನೀಡುತ್ತದೆ. ಈ ಸಂಸ್ಥೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಯಾವುದೇ ಬರಹವನ್ನು/ಪ್ರಸಾರವನ್ನು ‘ಸುಳ್ಳು ಅಥವಾ ನಕಲಿ’ ಎಂದು ನಿರ್ಧರಿಸುವ ಮತ್ತು ಅದನ್ನು ಅಳಿಸುವಂತೆ ಆದೇಶಿಸುವ ಹೆಚ್ಚಿನ ಅಧಿಕಾರವನ್ನು ಹೊಂದಿರುತ್ತದೆ” ಎಂದು ಗಿಲ್ಡ್‌ ಪತ್ರದಲ್ಲಿ ಹೇಳಿದೆ.

“ಯಾವುದು ‘ನಕಲಿ ಅಥವಾ ಅಲ್ಲ’ ಎಂಬುದನ್ನು ನಿರ್ಧರಿಸಲು ಸರ್ಕಾರ ಈ ಸತ್ಯಶೋಧನಾ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಿದೆ. ಇದು ಅಪಾಯಕಾರಿ” ಎಂದು ಗಿಲ್ಡ್ ಅಭಿಪ್ರಾಯಪಟ್ಟಿದೆ.

ಅಂತಹ ಸತ್ಯಶೋಧನಾ ಸಂಸ್ಥೆಗೆ ಮೇಲ್ವಿಚಾರಣಾ ಕಾರ್ಯವ್ಯಾಪ್ತಿಯನ್ನು ವಿವರಿಸಿಲ್ಲ. ನ್ಯಾಯಾಂಗ ದೂರದೃಷ್ಟಿ, ಕುಂದು ಕೊರತೆ ಆಲಿಕೆ ಹೇಗೆ ಎಂದು ತಿಳಿಸಿಲ್ಲ. ಸಾಮಾಜಿಕ ಜಾಲತಾಣಗಳನ್ನು ಬ್ಲಾಕ್‌ ಮಾಡಿಸಿರುವ ವಿರುದ್ಧ ಶ್ರೇಯಾ ಸಿಂಘಾಲ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮುಂದಿಟ್ಟಿರುವ ನಿರ್ದೇಶನಗಳನ್ನು ಹೇಗೆ ಅನುಸರಿಸಲಾಗಿದೆ ಎಂದು ತಿಳಿಸಿಲ್ಲ. ಇದೆಲ್ಲವೂ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ನಾಗರಿಕ ಹಕ್ಕುಗಳ ಸಂಸ್ಥೆ ‘ಇಂಟರ್‌ನೆಟ್ ಫ್ರೀಡಂ ಫೌಂಡೇಶನ್’ ಹೇಳಿಕೆ ನೀಡಿ, “ಹೊಸ ತಿದ್ದುಪಡಿ ಗಂಭೀರ ಬೆದರಿಕೆ ಉಂಟು ಮಾಡುವ ಸಾಧ್ಯತೆ ಇದೆ” ಎಂದು ಅಭಿಪ್ರಾಯಪಟ್ಟಿದೆ.

ಬಳಕೆದಾರರು ಕೇಂದ್ರ ಸರ್ಕಾರವನ್ನು ವಿರೋಧಿಸಿ ಯಾವುದೇ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌, ಟ್ವಿಟರ್‌ ಮೊದಲಾದವುಗಳಲ್ಲಿ ಪೋಸ್ಟ್‌ ಮಾಡದಂತೆ ಖಚಿತಪಡಿಸಿಕೊಳ್ಳಲು ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸಲು ಮುಂದಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...