ಆಂಧ್ರಪ್ರದೇಶ | ರೈಲ್ವೆ ಅಪಘಾತ ಪ್ರಕರಣ; ರೈಲು ಚಾಲನೆ ವೇಳೆ ಕ್ರಿಕೆಟ್‌ ನೋಡುತ್ತಿದ್ದ ರೈಲು ಚಾಲಕರು

Date:

Advertisements

ಸಿಗ್ನಲ್ ತಪ್ಪಿದ ರೈಲು ಮತ್ತೊಂದು ರೈಲಿಗೆ ಢಿಕ್ಕಿ ಹೊಡೆದು 14 ಪ್ರಯಾಣಿಕರು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ರೈಲ್ವೆ ಸಚಿವರು ಮಾಹಿತಿ ನೀಡಿದ್ದು, “ರೈಲಿನ ಲೋಕೋ ಪೈಲೆಟ್ (ರೈಲು ಚಾಲಕರು) ಕ್ರಿಕೆಟ್‌ ನೋಡುತ್ತಿದ್ದರು. ಹೀಗಾಗಿಯೇ ಘಟನೆ ನಡೆದಿದೆ” ಎಂದು ಹೇಳಿದ್ದಾರೆ.

“ಅಕ್ಟೋಬರ್‌ನಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ಮತ್ತು ಇಂಗ್ಲೆಂಡ್‌ ನಡುವೆ ನಡೆದ ಪಂದ್ಯವನ್ನು ಲೋಕೋ ಪೈಲಟ್ ಮತ್ತು ಸಹ ಲೋಕೋ ಪೈಲಟ್‌ ವೀಕ್ಷಿಸಿತ್ತಾ, ಕ್ರಿಕೆಟ್‌ ಎಡೆಗೆ ವಿಚಲಿತರಾದ ಕಾರಣ, ಘಟನೆ ನಡೆದಿದೆ” ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

“ಲೋಕೋ ಪೈಲಟ್‌ಗಳು ಮತ್ತು ಸಹಾಯಕ ಪೈಲಟ್‌ಗಳು ರೈಲನ್ನು ಓಡಿಸುವಲ್ಲಿ ಸಂಪೂರ್ಣವಾಗಿ ಗಮನಹರಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಖಾತ್ರಿ ಪಡೆಸಿಕೊಳ್ಳವು ವ್ಯವಸ್ಥೆಯನ್ನು ರೂಪಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

Advertisements

ಕಳೆದ ತಿಂಗಳು ಚಾಲಕ ಇಲ್ಲದೆ ಸರಕು ರೈಲು 70 ಕಿಲೋಮೀಟರ್ (40 ಮೈಲುಗಳು) ಪ್ರಯಾಣಿಸಿದ ನಂತರ ಅಧಿಕಾರಿಗಳು ಸ್ಟೇಷನ್ ಮಾಸ್ಟರ್ ಮತ್ತು ಇತರ ಮೂವರು ಉದ್ಯೋಗಿಗಳನ್ನು ವಜಾ ಮಾಡಿದ್ದಾರೆ. ಆ ಘಟನೆಯಿಂದಾಗಿ ಸುಮಾರು 50 ರೈಲುಗಳು ಎರಡು ಗಂಟೆಗಳ ಕಾಲ ನಾನಾ ನಿಲ್ದಾಣಗಳಲ್ಲಿ ನಿಂತು, ಪ್ರಮಾಣದಲ್ಲಿ ಅಸ್ಥವ್ಯಸ್ಥವಾಗಿತ್ತು. ಹೀಗಾಗಿ, ಅವರನ್ನು ವಜಾಗೊಳಿಸಲಾಗಿದೆ.

ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಭಾರತವೂ ಒಂದಾಗಿದೆ. ಆದರೆ, ಇತ್ತೀಚಿನ, ವರ್ಷಗಳಲ್ಲಿ ಹಲವಾರು ರೈಲ್ವೇ ಅನಾಹುತಗಳು ನಡೆದಿವೆ. 1981ರಲ್ಲಿ ಬಿಹಾರದಲ್ಲಿ ಸೇತುವೆಯನ್ನು ದಾಟುವಾಗ ರೈಲು ಹಳಿತಪ್ಪಿದ್ದರಿಂದ ಅಂದಾಜು 800 ಜನರು ಸಾವನ್ನಪ್ಪಿದರು. 2023ರ ಜೂನ್‌ನಲ್ಲಿ ಒಡಿಶಾ ರಾಜ್ಯದಲ್ಲಿ ಮೂರು ರೈಲುಗಳ ನಡುವೆ ಢಿಕ್ಕಿಯಾಗಿ ಸುಮಾರು 300 ಜನರು ಸಾವನ್ನಪ್ಪಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X